ಉಡುಪಿ: ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಸೇತುವೆ ಬಳಿ ರೆಡ್ ಹ್ಯಾಂಡ್ ಆಗಿ ಪೊಲೀಸರು ಬಂಧಿಸಿದ್ದು, 20,11,900 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.
ಕೋಟೆ ಗ್ರಾಮದ ಕಟಪಾಡಿ ಕಾಪು ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು ಉಚ್ಚಿಲ ಬಡಾ ನಿವಾಸಿ ಎನ್.ಎಂ.ಮುಹಮ್ಮದ್ ಮುಕ್ದುಮ್ ಅಲಿ (28) ಬಂಧಿತರು.
ಕಾರ್ಯಾಚರಣೆ ವೇಳೆ 69.127 ಗ್ರಾಂ ತೂಕದ ಎಂಡಿಎಂಎ, ಆರು ಮೊಬೈಲ್ ಫೋನ್, 1,100 ರೂಪಾಯಿ ನಗದು, ಕಾರು, ಲೆನೊವೊ ಲ್ಯಾಪ್ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಪೊಲೀಸರು ಅಂದಾಜು 20,11,900 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿ ಉಪವಿಭಾಗದ ಉಪಪೊಲೀಸ್ ಅಧೀಕ್ಷಕ ಪ್ರಭು ಡಿ.ಟಿ. ಹಾಗೂ ಉಡುಪಿ ನಗರ ಠಾಣೆಯ ಪ್ರಭಾರಿ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಡುಪಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪನಿರೀಕ್ಷಕರಾದ ಪುನೀತ್ ಕುಮಾರ್ ಬಿ., ಸುರೇಶ್ ಕೆ., ಅಬ್ದುಲ್ ಬಶೀರ್, ಹೇಮಂತ್, ಆನಂದ್ ಮತ್ತು ಶಿವಕುಮಾರ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ಪ್ರವೀಣ್, ರಾಘವೇಂದ್ರ, ಮಾಯಪ್ಪ, ಪ್ರಶಾಂತ್ ಭಾಗವಹಿಸಿದ್ದರು.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…