ಉಡುಪಿ: ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಸೇತುವೆ ಬಳಿ ರೆಡ್ ಹ್ಯಾಂಡ್ ಆಗಿ ಪೊಲೀಸರು ಬಂಧಿಸಿದ್ದು, 20,11,900 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.
ಕೋಟೆ ಗ್ರಾಮದ ಕಟಪಾಡಿ ಕಾಪು ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು ಉಚ್ಚಿಲ ಬಡಾ ನಿವಾಸಿ ಎನ್.ಎಂ.ಮುಹಮ್ಮದ್ ಮುಕ್ದುಮ್ ಅಲಿ (28) ಬಂಧಿತರು.
ಕಾರ್ಯಾಚರಣೆ ವೇಳೆ 69.127 ಗ್ರಾಂ ತೂಕದ ಎಂಡಿಎಂಎ, ಆರು ಮೊಬೈಲ್ ಫೋನ್, 1,100 ರೂಪಾಯಿ ನಗದು, ಕಾರು, ಲೆನೊವೊ ಲ್ಯಾಪ್ಟಾಪ್ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಪೊಲೀಸರು ಅಂದಾಜು 20,11,900 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿ ಉಪವಿಭಾಗದ ಉಪಪೊಲೀಸ್ ಅಧೀಕ್ಷಕ ಪ್ರಭು ಡಿ.ಟಿ. ಹಾಗೂ ಉಡುಪಿ ನಗರ ಠಾಣೆಯ ಪ್ರಭಾರಿ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಡುಪಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪನಿರೀಕ್ಷಕರಾದ ಪುನೀತ್ ಕುಮಾರ್ ಬಿ., ಸುರೇಶ್ ಕೆ., ಅಬ್ದುಲ್ ಬಶೀರ್, ಹೇಮಂತ್, ಆನಂದ್ ಮತ್ತು ಶಿವಕುಮಾರ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಪ್ರವೀಣ್ ಕುಮಾರ್, ಪ್ರವೀಣ್, ರಾಘವೇಂದ್ರ, ಮಾಯಪ್ಪ, ಪ್ರಶಾಂತ್ ಭಾಗವಹಿಸಿದ್ದರು.
ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…