ಉಡುಪಿ : ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ವರ್ಷದ ಯುವಕ ಸಾವನ್ನಪ್ಪಿದ ಘಟನೆ ಆಗಸ್ಟ್ 3 ರ ಸೋಮವಾರ ಕುಂಬ್ರಗೋಡು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಆಕಾಶ್ ಪೂಜಾರಿ (21) ಎಂದು ಗುರುತಿಸಲಾಗಿದ್ದು ಕುಂಬ್ರಗೋಡು ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.
ಕುಂದಾಪುರ-ಉಡುಪಿ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಂತು ಆಕಾಶ್ ಮತ್ತು ಶರತ್ ಎಂಬವರು ಮಾತನಾಡುತ್ತಿದ್ದರು ಎಂದು ಹೇಳಲಾಗಿದ್ದು ಈ ಸಂದರ್ಭದಲ್ಲಿ ಉಡುಪಿಯಿಂದ ಕುಂದಾಪುರ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಸ್ವಿಫ್ಟ್ ಡಿಜೈರ್ ಕಾರು ಡಿವೈಡರ್ಗೆ ಗುದ್ದಿ ಪಲ್ಟಿ ಹೊಡೆದಿದ್ದು ಆಕಾಶ್ಗೆ ಡಿಕ್ಕಿ ಹೊಡೆದಿದೆ. ಶರತ್ನನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರೀತಮ್ ಎಂಬ ವ್ಯಕ್ತಿ ಕಾರು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ.ಆಕಾಶ್ ಅನ್ನು ಕೂಡಾ ಮಹೇಶ್ ಆಸ್ಪತ್ರೆಗೆ ಕರೆತರಲಾಗಿದ್ದು ವೈದ್ಯರು ಈಗಾಗಲೇ ಆಕಾಶ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…