ಉಡುಪಿ : ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ವರ್ಷದ ಯುವಕ ಸಾವನ್ನಪ್ಪಿದ ಘಟನೆ ಆಗಸ್ಟ್ 3 ರ ಸೋಮವಾರ ಕುಂಬ್ರಗೋಡು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಆಕಾಶ್ ಪೂಜಾರಿ (21) ಎಂದು ಗುರುತಿಸಲಾಗಿದ್ದು ಕುಂಬ್ರಗೋಡು ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.
ಕುಂದಾಪುರ-ಉಡುಪಿ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಂತು ಆಕಾಶ್ ಮತ್ತು ಶರತ್ ಎಂಬವರು ಮಾತನಾಡುತ್ತಿದ್ದರು ಎಂದು ಹೇಳಲಾಗಿದ್ದು ಈ ಸಂದರ್ಭದಲ್ಲಿ ಉಡುಪಿಯಿಂದ ಕುಂದಾಪುರ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಸ್ವಿಫ್ಟ್ ಡಿಜೈರ್ ಕಾರು ಡಿವೈಡರ್ಗೆ ಗುದ್ದಿ ಪಲ್ಟಿ ಹೊಡೆದಿದ್ದು ಆಕಾಶ್ಗೆ ಡಿಕ್ಕಿ ಹೊಡೆದಿದೆ. ಶರತ್ನನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರೀತಮ್ ಎಂಬ ವ್ಯಕ್ತಿ ಕಾರು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ.ಆಕಾಶ್ ಅನ್ನು ಕೂಡಾ ಮಹೇಶ್ ಆಸ್ಪತ್ರೆಗೆ ಕರೆತರಲಾಗಿದ್ದು ವೈದ್ಯರು ಈಗಾಗಲೇ ಆಕಾಶ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…