Featured

ಉಡುಪಿ : ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡಿ :  ಮೇಜರ್ ಮಣಿವಣ್ಣನ್ -Vishwanews24

ಉಡುಪಿ : ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡಿ :  ಮೇಜರ್ ಮಣಿವಣ್ಣನ್ -Vishwanews24

ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಿ, ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ತಲುಪುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೇ.ಮಣಿವಣ್ಣನ್ ಸೂಚಿಸಿದರು.

ಅವರು ಶುಕ್ರವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡುವ ಕುರಿತಂತೆ ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆಯಿರಿ, ಎಲ್ಲಾ ಬಸ್‌ಗಳಲ್ಲಿ ನೊಂದಾಯಿತ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಫಲಕಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರ ನೀಡಿ, ಕಾರ್ಮಿಕ ಸಹಾಯವಾಣಿ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿ, ಜಿಲ್ಲೆಯ ಎಲ್ಲಾ ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ವಿವಿಧ ಹೊಸ ಯೋಜನೆಗಳನ್ನು ಕೈಗೊಳ್ಳುವ ಕುರಿತಂತೆ ಸಂಬAದಪಟ್ಟ ಇಲಾಖೆಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಮಣಿವಣ್ಣನ್, ಜಿಲ್ಲೆಯ ತೋಟಗಾರಿಕಾ ಇಲಾಖೆಯಿಂದ ರಫ್ತು ಆಧಾರಿತ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ, ಆಹಾರ ಸಂಸ್ಕರಣಾ ಉದ್ದಿಮೆಗಳ ಆರಂಭ ಕುರಿತಂತೆ ಮತ್ತು ಸರ್ಕಾರದಿಂದ ಲಭ್ಯವಿರುವ ವಿವಿಧ ಯೋಜನೆ ಮತ್ತು ಸಹಾಯಧನದ ರೈತರಿಗೆ ಮಾಹಿತಿ ನೀಡಿ ಎಂದರು.

ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ಕುರಿತಂತೆ, ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ತಿಳಿಸಿದ ಅವರು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿ,ಆದಷ್ಟು ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಹಾನಿಗೊಳಗಾದ ಸಂತ್ರಸ್ಥರಿಗೆ ತಕ್ಷಣದಲ್ಲಿ ಪರಿಹಾರ ನೀಡುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ನಿರ್ದೇಶನ ನೀಡಿದ ಅವರು, ಈಗಾಗಲೇ ಪರಿಹಾರ ವಿತರಿಸಿರುವ ಸಂತ್ರಸ್ಥರ ಸಂಪೂರ್ಣ ವಿವರಗಳನ್ನು ನೀಡುವಂತೆ ತಿಳಿಸಿದರು.

ಜಿಲ್ಲೆಯಿಂದ ಈಗಾಗಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿ, ಅನುಮೋದನೆಗೆ ಬಾಕಿ ಇರುವ ಕಡತಗಳ ಕುರಿತು ವಿವರಗಳನ್ನು ನೀಡಿ, ಇವುಗಳ ಶೀಘ್ರ ಮಂಜೂರಾತಿಗೆ ಪ್ರಯತ್ನಿಸುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಕುರಿತ ಪರಿಶೀಲಿಸಿದ ಅವರು, , ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲು ಮಾಡಿ, ಹೊಂ ಐಸೋಲೇಷನ್ ನಲ್ಲಿ ದಾಖಲಿಸುವಾಗ, ಮನೆಯಲ್ಲಿ ರೋಗಿಗಳಿಗೆ ಪ್ರತ್ಯೇಕವಾಗಿ ಇರಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಇರುವ ಬಗ್ಗೆ ಪರಿಶೀಲಿಸಿ ಎಂದರು.

ಈಗಾಗಲೇ ಹೆಬ್ರಿಯ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ ಗೋಶಾಲೆ ನಿರ್ಮಿಸಲು ಜಮೀನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಇಲ್ಲಿ ಉತ್ತಮ ರೀತಿಯಲ್ಲಿ ಮಾದರಿ ಗೋಶಾಲೆ ನಿರ್ಮಿಸಿ ಹಾಗೂ ಗೋವುಗಳ ಆರೈಕೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳು ಇರುವಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಿ ಎಂದು ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಮಾಡಲು ಕ್ರಮ ಕೈಗೊಳ್ಳಿ, ಹಸಿ ಕಸದಿಂದ ಕಾಂಪೋಸ್ಟ್ ಮತ್ತು ಒಣಕಸವನ್ನು ಮರು ಬಳಕೆ ಮಾಡುವ ಕಾರ್ಯ ನಡೆಯಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆ ಎಸ್ಪಿ ,ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

28 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

34 minutes ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

39 minutes ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

46 minutes ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

56 minutes ago

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

21 hours ago