Featured

ಉಡುಪಿ : ಕಿತ್ತೂರು ಚೆನ್ನಮ್ಮ ಮಹಿಳೆಯರಿಗೆ ಮಾದರಿ – Vishwanews24

ಉಡುಪಿ : ಕಿತ್ತೂರು ಚೆನ್ನಮ್ಮ ಮಹಿಳೆಯರಿಗೆ ಮಾದರಿ – Vishwanews24

ಉಡುಪಿ: ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ಮತ್ತು ದಿಟ್ಟತನ ಇಂದಿನ ಸಮಾಜದಲ್ಲಿ ಮಹಿಳೆಯರಿಗೆ ಮಾದರಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಪುಷ್ಪಾರ್ಚನೆಮಾಡಿ ಮಾತನಾಡಿದರು.
ಸಮಾಜದ ಒಳಿತಿಗಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮನ ತ್ಯಾಗ ಬಲಿದಾನವನ್ನು ಶ್ಲಾಘನೆ ಮಾಡುವ ಮೂಲಕ ಮಕ್ಕಳಲ್ಲಿ ಸಾಧನೆಯ ಛಲವನ್ನು ತುಂಬುಬೇಕು ಎಂದರು. ಚಿತ್ರಕಲಾ ಮಂದಿರದ ನಿರಂಜನ್ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಎಂದರೆ ಕಿರಿಯರಿಂದ ಹಿರಿಯರಿಗೆ ಸಂಚಲನ
ಮೂಡಿಸುವಂತ ಅಪ್ರತಿಮ ವೀರ ಮಹಿಳೆ, ಕರ್ನಾಟಕದ ಹೆಮ್ಮೆ ಎಂದರು.

ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಕಿರಣ ಪಡ್ನೇಕರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಉಡುಪಿ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತಿನ ಖಜಾಂಚಿ ಉಮಾಪತಿ, ಬಿ.ಸಿ.ಎಂ.ಇಲಾಖೆಯ ಉಪನಿರ್ದೇಶಕ ಜಗದೀಶ್ ಶೆಟ್ಟರ್, ಬಸವ ಸಮಿತಿ ಕಾರ್ಯದರ್ಶಿ ಸುರೇಶ್ , ಪಶುಸಂಗೋಪನೆ ಇಲಾಖೆಯ ಅಧಿಕಾರಿ ಡಾ. ಪ್ರಶಾಂತ್ ಶೆಟ್ಟಿ , ಚಿತ್ರಕಲಾ ಮಂದಿರದ ಸದಸ್ಯರುಗಳಾದ ಮನೋಜ್, ಗೌತಮ್ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

6 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

8 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

8 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

9 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

9 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

9 hours ago