ಉಡುಪಿ: ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ, ಭಾರತೀಯ ರೈಲ್ವೆಯು ಕುಂದಾಪುರ ರೈಲ್ವೇ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶಿಸಿದೆ.
ರೈಲು ಸಂಖ್ಯೆ 22653/22654 ತಿರುವನಂತಪುರಂ ಸೆಂಟ್ರಲ್ – ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ ಮತ್ತು ರೈಲು ಸಂಖ್ಯೆ 22655/22656 ಎರ್ನಾಕುಲಂ – ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲುಗಳು ಕುಂದಾಪುರ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆ ನೀಡಲಿವೆ.
ಈ ಹೆಚ್ಚುವರಿ ನಿಲುಗಡೆಯಿಂದ ಕುಂದಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರಿಗೆ ದೆಹಲಿ ಮತ್ತು ಇತರ ಉತ್ತರ ಭಾರತದ ಭಾಗಗಳಿಗೆ ಪ್ರಯಾಣಿಸುವುದು ಸುಲಭವಾಗಲಿದೆ.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಹಿಂದೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ ಸೋಮಣ್ಣ ಅವರಿಗೆ ಕುಂದಾಪುರ ರೈಲು ನಿಲ್ದಾಣದಲ್ಲಿ ಈ ನಿಲುಗಡೆಗೆ ಮನವಿ ಮಾಡಿದ್ದರು.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…