Featured

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ

ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ ವತಿಯಿಂದ ಈ ವರ್ಷದ ನವೆಂಬರ್ ತಿಂಗಳಿನಿಂದ ‘ಆದಿ ಮಾಯೆ ಮೂಕಾಂಬಿಕಾ–ಸ್ವಾಮಿ ಕೊರಗಜ್ಜ ಕೃಪಾಪೋಷಿತ ಯಕ್ಷಗಾನ ಮಂಡಳಿ’ ಆರಂಭಗೊಳ್ಳಲಿದೆ ಎಂದು ಮೇಳದ ಯಜಮಾನ ಡಾ. ಕೆ. ಕೃಷ್ಣ ಕುಲಾಲ್ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರವನ್ನು ಪ್ರಶ್ನಾ ಚಿಂತನೆಯ ಆಧಾರದಲ್ಲಿ 2019ರಲ್ಲಿ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆ ಮಾಡಲಾಗಿದೆ.

ಕಳೆದ ಏಳು ವರ್ಷಗಳಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಹರಕೆಗಳನ್ನು ಸಲ್ಲಿಸುತ್ತಿದ್ದು, ಕ್ಷೇತ್ರವು ಭಕ್ತರ ನಂಬಿಕೆಯ ಕೇಂದ್ರವಾಗಿ ಬೆಳೆದಿದೆ ಎಂದು ಹೇಳಿದರು.

ಆದಿ ಮಾಯೆ ಮೂಕಾಂಬಿಕಾ ದೇವಿ ಹಾಗೂ ಸ್ವಾಮಿ ಕೊರಗಜ್ಜ ದೈವದ ಅಪ್ಪಣೆಯಂತೆ ಆರಂಭವಾಗುತ್ತಿರುವ ಈ ಯಕ್ಷಗಾನ ಮೇಳದಲ್ಲಿ ತೆಂಕುತಿಟ್ಟು ಮತ್ತು ಬಡಗುತಿಟ್ಟಿನ ಸಮ್ಮಿಲನ ಇರಲಿದೆ. ನುರಿತ ಹಾಗೂ ಅನುಭವಿ ಕಲಾವಿದರು, ಹೊಸ ವೇಷಭೂಷಣ, ಆಕರ್ಷಕ ರಂಗಸಜ್ಜಿಕೆ, ಪ್ರಸಿದ್ಧ ಹಿಮ್ಮೇಳದೊಂದಿಗೆ ಕ್ಷೇತ್ರದ ಮಹಿಮೆಯನ್ನು ಸಾರುವ ಪ್ರಸಂಗಗಳ ಜತೆಗೆ ಪೌರಾಣಿಕ ಹಾಗೂ ಸಾಮಾಜಿಕ ಕಥಾ ಪ್ರಸಂಗಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಭಕ್ತರು ಹಾಗೂ ಯಕ್ಷಗಾನ ಕಲಾಪ್ರೇಮಿಗಳು ತಮ್ಮ ಊರುಗಳಲ್ಲಿ ಮೇಳದ ಪ್ರದರ್ಶನಗಳನ್ನು ಆಯೋಜಿಸಿ, ಕಲಾವಿದರನ್ನು ಪ್ರೋತ್ಸಾಹಿಸಿ ಮೇಳವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

Vishwa News 24

Recent Posts

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

3 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

3 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

3 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

3 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

4 hours ago

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ – vishwanews24

ಒಂದು ತಿಂಗಳೊಳಗೆ ಭಾರತ್‌ ಜೋಡೋ ಯುವ ಸಂಘಗಳು ಅಸ್ತಿತ್ವಕ್ಕೆ: ಪರಮೇಶ್ವರ್‌ ಬೆಂಗಳೂರು: ಯವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸುವ…

4 hours ago