Featured

ಉಡುಪಿ : ಕುಟುಂಬ ಗುರುತಿನ ಚೀಟಿ ತಂತ್ರಾ0ಶದಲ್ಲಿ ಅಂಗವಿಕಲರ ನೋಂದಣಿಗೆ ಸೂಚನೆ -Vishwanews24

ಉಡುಪಿ : ಕುಟುಂಬ ಗುರುತಿನ ಚೀಟಿ ತಂತ್ರಾ0ಶದಲ್ಲಿ ಅಂಗವಿಕಲರ ನೋಂದಣಿಗೆ ಸೂಚನೆ -Vishwanews24

ಉಡುಪಿ: ಕುಟುಂಬ ಗುರುತಿನ ಸಂಖ್ಯೆ ಯೋಜನೆಗಾಗಿ ವಿಕಲಚೇತನರ ಮಾಹಿತಿಯನ್ನು ಇ-ಆಡಳಿತ ಇಲಾಖೆಯ ಹೊಸದಾದ ತಂತ್ರಾ0ಶದಲ್ಲಿ ದತ್ತಾಂಶವನ್ನು ಅಳವಡಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ಮತ್ತು ಆಯಾ ತಾಲೂಕು ಮಟ್ಟದಲ್ಲಿ ವಿವಿಧೋದ್ದೇಶ ಪುನವರ್ಸತಿ ಕಾರ್ಯಕರ್ತರು(ಎಮ್.ಆರ್.ಡಬ್ಲೂ) ಹಾಗೂ ಗ್ರಾಮ ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಂದ (ವಿ.ಆರ್.ಡಬ್ಲೂ) ಈಗಾಗಲೇ ಕಾರ್ಯ ಪ್ರಾರಂಭವಾಗಿದ್ದು, ಫಲಾನುಭವಿಗಳು ಅವಶ್ಯಕ ದಾಖಲಾತಿಗಳೊಂದಿಗೆ ಎಮ್.ಆರ್.ಡಬ್ಲೂ ಹಾಗೂ ವಿ.ಆರ್.ಡಬ್ಲೂ ರವರಿಗೆ ಸರಿಯಾದ ಮಾಹಿತಿ ನೀಡಿ ನಮೂದಿಸಿಕೊಳ್ಳಬೇಕು.

ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಿಕಲಚೇತನರ ಗುರುತಿನ ಚೀಟಿ (ಹಳೆ ಪುಸ್ತಕದ ಸಂಖ್ಯೆ ಹಾಗೂ ಯುಡಿಐಡಿಗೆ ಸಲ್ಲಿಸಿದ ಅರ್ಜಿ ಸಂಖ್ಯೆ) ಅಥವಾ ಯುಡಿಐಡಿ ಕಾರ್ಡ್ ಸಂಖ್ಯೆ, ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಂಖ್ಯೆ, ಇಲಾಖೆ ಹಾಗೂ ಇತರೆ ಇಲಾಖೆಯಿಂದ ಪಡೆದ ಸೌಲಭ್ಯಗಳ ವಿವರಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ 0820-2574810/811, ವಿವಿಧೋದ್ದೇಶ ಪುನವರ್ಸತಿ ಕಾರ್ಯಕರ್ತರು(ಎಮ್.ಆರ್.ಡಬ್ಲೂ) ಉಡುಪಿ ಮೊ: 9449334270, ಕುಂದಾಪುರ ಮೊ: 9901824878, ಕಾರ್ಕಳ ಮೊ: 9481145518 ಹಾಗೂ ಆಯಾ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು (ವಿ.ಆರ್.ಡಬ್ಲೂ) ಸಂಪರ್ಕಿಸಬಹುದು.

2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ 16,922 ಅಂಗವಿಕಲರು ಇದ್ದು, ಜಿಲ್ಲೆಯಲ್ಲಿ ಇನ್ನೂ ಹಲವರು ಸದರಿ ತಂತ್ರಾ0ಶದಲ್ಲಿ ಮಾಹಿತಿಯನ್ನು ಅಳವಡಿಸದೇ ಇರುವ ಹಿನ್ನೆಲೆಯಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಡಚಣೆ ಉಂಟಾಗಿರುವುದರಿ0ದ ಸದರಿ ಯೋಜನೆಯಲ್ಲಿ ವಿಕಲಚೇತನರು ಸರಿಯಾದ ಮಾಹಿತಿ ನೀಡಿ ನಮೂದಿಸಿಕೊಂಡು ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

19 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

19 hours ago