Featured

ಉಡುಪಿ : ಕುಟುಂಬ ಗುರುತಿನ ಚೀಟಿ ತಂತ್ರಾ0ಶದಲ್ಲಿ ಅಂಗವಿಕಲರ ನೋಂದಣಿಗೆ ಸೂಚನೆ -Vishwanews24

ಉಡುಪಿ : ಕುಟುಂಬ ಗುರುತಿನ ಚೀಟಿ ತಂತ್ರಾ0ಶದಲ್ಲಿ ಅಂಗವಿಕಲರ ನೋಂದಣಿಗೆ ಸೂಚನೆ -Vishwanews24

ಉಡುಪಿ: ಕುಟುಂಬ ಗುರುತಿನ ಸಂಖ್ಯೆ ಯೋಜನೆಗಾಗಿ ವಿಕಲಚೇತನರ ಮಾಹಿತಿಯನ್ನು ಇ-ಆಡಳಿತ ಇಲಾಖೆಯ ಹೊಸದಾದ ತಂತ್ರಾ0ಶದಲ್ಲಿ ದತ್ತಾಂಶವನ್ನು ಅಳವಡಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ಮತ್ತು ಆಯಾ ತಾಲೂಕು ಮಟ್ಟದಲ್ಲಿ ವಿವಿಧೋದ್ದೇಶ ಪುನವರ್ಸತಿ ಕಾರ್ಯಕರ್ತರು(ಎಮ್.ಆರ್.ಡಬ್ಲೂ) ಹಾಗೂ ಗ್ರಾಮ ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಂದ (ವಿ.ಆರ್.ಡಬ್ಲೂ) ಈಗಾಗಲೇ ಕಾರ್ಯ ಪ್ರಾರಂಭವಾಗಿದ್ದು, ಫಲಾನುಭವಿಗಳು ಅವಶ್ಯಕ ದಾಖಲಾತಿಗಳೊಂದಿಗೆ ಎಮ್.ಆರ್.ಡಬ್ಲೂ ಹಾಗೂ ವಿ.ಆರ್.ಡಬ್ಲೂ ರವರಿಗೆ ಸರಿಯಾದ ಮಾಹಿತಿ ನೀಡಿ ನಮೂದಿಸಿಕೊಳ್ಳಬೇಕು.

ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಿಕಲಚೇತನರ ಗುರುತಿನ ಚೀಟಿ (ಹಳೆ ಪುಸ್ತಕದ ಸಂಖ್ಯೆ ಹಾಗೂ ಯುಡಿಐಡಿಗೆ ಸಲ್ಲಿಸಿದ ಅರ್ಜಿ ಸಂಖ್ಯೆ) ಅಥವಾ ಯುಡಿಐಡಿ ಕಾರ್ಡ್ ಸಂಖ್ಯೆ, ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಂಖ್ಯೆ, ಇಲಾಖೆ ಹಾಗೂ ಇತರೆ ಇಲಾಖೆಯಿಂದ ಪಡೆದ ಸೌಲಭ್ಯಗಳ ವಿವರಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ 0820-2574810/811, ವಿವಿಧೋದ್ದೇಶ ಪುನವರ್ಸತಿ ಕಾರ್ಯಕರ್ತರು(ಎಮ್.ಆರ್.ಡಬ್ಲೂ) ಉಡುಪಿ ಮೊ: 9449334270, ಕುಂದಾಪುರ ಮೊ: 9901824878, ಕಾರ್ಕಳ ಮೊ: 9481145518 ಹಾಗೂ ಆಯಾ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು (ವಿ.ಆರ್.ಡಬ್ಲೂ) ಸಂಪರ್ಕಿಸಬಹುದು.

2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ 16,922 ಅಂಗವಿಕಲರು ಇದ್ದು, ಜಿಲ್ಲೆಯಲ್ಲಿ ಇನ್ನೂ ಹಲವರು ಸದರಿ ತಂತ್ರಾ0ಶದಲ್ಲಿ ಮಾಹಿತಿಯನ್ನು ಅಳವಡಿಸದೇ ಇರುವ ಹಿನ್ನೆಲೆಯಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಡಚಣೆ ಉಂಟಾಗಿರುವುದರಿ0ದ ಸದರಿ ಯೋಜನೆಯಲ್ಲಿ ವಿಕಲಚೇತನರು ಸರಿಯಾದ ಮಾಹಿತಿ ನೀಡಿ ನಮೂದಿಸಿಕೊಂಡು ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

4 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

4 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

5 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

5 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

5 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

8 hours ago