Featured

ಉಡುಪಿ: : ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ –  ಓರ್ವನ ಕೊಲೆಯಲ್ಲಿ ಅಂತ್ಯ – Vishwanews24

ಉಡುಪಿ: : ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ –  ಓರ್ವನ ಕೊಲೆಯಲ್ಲಿ ಅಂತ್ಯ

ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಈ ಸಂಬಂಧ ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ

ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕುಡಿದ ನಶೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿದ್ದು ಬಾರ್ ನಿಂದ ಹೊರಗಡೆ ಬಂದ ದಯಾನಂದ ಮತ್ತು ಭರತ್ ಪರಸ್ಪರ ಜಗಳ ಮಾಡಿಕೊಂಡಿದ್ದು ಈ ವೇಳೆ ಭರತ್ ತನ್ನ ಕೈ ಬೆರಳಿನಲ್ಲಿ ಇದ್ದ ಕಬ್ಬಿಣದ ಪಂಚ್ ನಿಂದ ದಯಾನಂದ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ದಯಾನಂದನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಹಲ್ಲೆ ನಡೆಸಿದ ಭರತ್ ಘಟನೆಯ ಅನಂತರ ಸ್ಥಳದಿಂದ ನಾಪತ್ತೆಯಾಗಿದ್ದು ಸ್ಥಳೀಯರ ಸಹಕಾರದಿಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಉಡುಪಿ ಎಸ್‌ ಐ ಹಾಕೆ ಅಕ್ಷಯ್ ಮಚ್ಚಿಂದ್ರ, ಕಾಪು ಡಿವೈಎಸ್‌ ಪಿ ಅರವಿಂದ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆಸಿ ಪೂವಯ್ಯ, ಕಾಪು ಎಸ್‌ ಐ ಸುಮಾ.ಬಿ, ಕ್ರೈಮ್‌ ಎಸ್‌ ಐ ಭರತೇಶ್‌ ಕಂಕನವಾಡಿ ಸಹಿತ ಪೊಲೀಸರು ಅಧಿಕಾರಿಗಳು ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago