Featured

ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ  : ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ಕಂಡುಬರದ0ತೆ ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಗ್ರಾಮಗಳನ್ನು ಗುರುತಿಸಿ, ಈ ಬಾರಿ ಆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬರದAತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಎಲ್ಲಾ ತಾಲೂಕುಗಳು ತಹಸೀಲ್ದಾರುಗಳು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಗಳಲ್ಲಿ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಕುರಿತಂತೆ ಸಂಬAದಪಟ್ಟ ಗ್ರಾಮ ಪಂಚಾಯತ್ನ ಪಿಡಿಓ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿಯರ್ಗಳ ಅಭಿಪ್ರಾಯ ಪಡೆದು ಟೆಂಡರ್ ಪ್ರಕ್ರಿಯೆಗಳನ್ನು ಸಿದ್ಧ ಮಾಡಿಟ್ಟುಕೊಂಡು, ಸಮಸ್ಯೆ ತಲೆದೋರಿದ ಕೂಡಲೇ ನೀರು ಸರಬರಾಜು ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದAತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಿ. ಸಾಧ್ಯವಿದ್ದಲ್ಲಿ ಖಾಸಗಿ ಬೋರ್ ವೆಲ್ಗಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್ಗಳಿಗೆ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಿ ನಕ್ಷೆ ತಯಾರಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಗ್ರಾಮ ಪಂಚಾಯತ್ಗಳ ವಿಪತ್ತು ನಿರ್ವಹಣಾ ಯೋಜನೆಯಲ್ಲಿ ಅಗತ್ಯವಿರುವ ಗ್ರಾಮ ಪಂಚಾಯತ್ಗಳಿಗೆ ಸುರಕ್ಷತಾ ಉಪಕರಣಗಳನ್ನು ಒದಗಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಾಜು, ನಗರಾಬಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ರವಿ ಓಜನಹಳ್ಳಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

29 minutes ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

3 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

3 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

3 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

3 hours ago