ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ ಎಂದು ಕಾಂಗ್ರೆಸ್ ಮುಖಂಡ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ
ಕುದುರೆಮುಖ ಅರಣ್ಯ ಪ್ರದೇಶಗಳಲ್ಲಿ ದಶಕಗಳಿನಿಂದ ವಾಸಿಸುತ್ತಿರುವ ಕುಟುಂಬಗಳು ಆ ಭಾಗದಲ್ಲಿ ವಾಸ ಮಾಡಲು ಅನುಮತಿಯಿಲ್ಲದೆ, ಜೀವನೋಪಾಯಕ್ಕೆ ತೀವ್ರ ಸಂಕಷ್ಟ ಎದುರಿಸುತ್ತಿವೆ. ಈ ಕುಟುಂಬಗಳಿಗೆ ಪುನರ್ವಸತಿ ಹಾಗೂ ನ್ಯಾಯಯುತ ಪರಿಹಾರದ ಅಗತ್ಯ ಬಹಳ ದಿನಗಳಿಂದಲೂ ಪ್ರಸ್ತಾಪವಾಗುತ್ತಿದ್ದ ಮಹತ್ವದ ವಿಚಾರ.
ಕುದುರೆಮುಖ ಕಬ್ಬಿಣದ ಅದಿರು ಗಣಿಗಾರಿಕೆ ಕಂಪನಿ ಕೆಲಸಕ್ಕಾಗಿ ವಿವಿಧ ಕಡೆಗಳಿಂದ ಹಲವು ಕುಟುಂಬಗಳು ಕುದುರೆಮುಖ ಪ್ರದೇಶಕ್ಕೆ ಬಂದು ಕೆ ಐ ಓ ಸಿ ಎಲ್ ಕಂಪನಿ ಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು,ಆನಂತರದ ದಿನಗಳಲ್ಲಿ ಕಂಪನಿ ಮುಚ್ಚಿ ಹೋಗಿದ್ದು ಇಲ್ಲಿ ದುಡಿಯುತ್ತಿದ್ದ ಹಲವರು ಕುಟುಂಬಗಳು ನಿರೋದ್ಯೋಗಿಗಳಾಗಿ ಹೋಗಿದ್ದಾರೆ.ಸದ್ಯ ಕಳಸ ಶೃಂಗೇರಿ ಕಡೆ ಕಾಪಿ ತೋಟಗಳಲ್ಲಿ ಹಾಗೂ ಉಡುಪಿ ಭಾಗಕ್ಕೆ ಕೃಷಿ ಕಾಮಗಾರಿಗೆ ವಲಸಿ ಕೂಲಿ ಕೆಲಸ ಮಾಡಿಕೊಂಡು ಸ್ವಂತಕ್ಕೆ ಸೂರು ಇಲ್ಲದೆ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ.
ಕುದುರೆಮುಖ ಪರಿಸರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಹಾಗು ಕಸ್ತೂರಿ ರಂಗನ್ ವರದಿ ವಿಚಾರ ಕೂಡ ಇರುವುದು ಆ ಬಾಗದ ಜನರಿಗೆ ಕುದುರೆಮುಖ ಭಾಗದಲ್ಲಿ ವಸತಿಗಾಗಿ ಜಾಗ ನೀಡುವಲ್ಲಿ ಕಾನೂನು ತೊಡಕಾಗಿದೆ.ಈ ಎಲ್ಲಾ ನಿಟ್ಟಿನಲ್ಲಿ ಆ ಭಾಗದಲ್ಲಿ ಇರುವ ನಿರಾಶ್ರಿತರಿಗೆ ಸರ್ಕಾರವೇ ಪುನರ್ವಸತಿ ನೀಡಬೇಕೆಂದು ಹಾಗೂ ಮೂಲಬೂತ ಸೌಕರ್ಯಗಳಿಲ್ಲದೆ ಜನರು ಎದುರಿಸುತ್ತಿರುವ ದೀರ್ಘಕಾಲದ ನೋವಿಗೆ ಸಕಾರಾತ್ಮಕ ಪರಿಹಾರ ದೊರಕುವಂತೆ ಸರ್ಕಾರಕ್ಕೆ ಕಾಂಗ್ರೆಸ್ ಮುಖಂಡರಾದ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…