ಉಡುಪಿ : ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನಲ್ಲಿ ಮೂರು ದಶಕಗಳ ಕಾಲ ಭಾಗವತರಾಗಿ, ಅನುಭವಿ ರಂಗ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಶ್ರೀ ಕುರಿಯ ಗಣಪತಿ ಶಾಸ್ತಿçಗಳು ಆಯ್ಕೆಯಾಗಿದ್ದಾರೆ.
ತೆಂಕುತಿಟ್ಟು ಯಕ್ಷಗಾನದ ಗುರುಕುಲವೆಂದು ಮನ್ನಣೆ ಪಡೆದ ಕುರಿಯ ಮನೆತನದವರಾದ ಗಣಪತಿ ಶಾಸ್ತಿçಗಳು, ತಮ್ಮ ದೊಡ್ಡತಂದೆಯವರಾದ ಕುರಿಯ ವಿಠಲ ಶಾಸ್ತ್ರಿಗಳ ಶಿಷ್ಯರಾಗಿ ಪ್ರಸಿದ್ಧ ವೇಷಧಾರಿಯಾಗಿದ್ದವರು. ಅಗರಿ ಶ್ರೀನಿವಾಸ ಭಾಗವತರ ಪ್ರೇರಣೆಯೊಂದಿಗೆ ಭಾಗವತಿಕೆ ಕ್ಷೇತ್ರವನ್ನು ಪ್ರವೇಶಿಸಿದರು.
ಕಟೀಲು ಮೇಳದಲ್ಲಿ ಪ್ರದಾನ ಭಾಗವತರಾಗಿ ಮೂರು ದಶಕಗಳ ವ್ಯವಸಾಯದ ಅವಧಿಯಲ್ಲಿ ನೆಡ್ಲೆ ನರಸಿಂಹ ಭಟ್, ಮರವಂತೆ ನರಸಿಂಹದಾಸ, ಪಡ್ರೆ ಚಂದ್ರು, ಕೇದಗಡಿ ಗುಡ್ಡಪ್ಪ ಗೌಡ, ಮುದುಕುಂಜ ವಾಸುದೇವ ಪ್ರಭು, ಕುಡಾಣ ಗೋಪಾಲ ಭಟ್, ಕೋಡಿ ಕುಷ್ಠ ಗಾಣಿಗ, ಪುಂಡರಿಕಾಕ್ಷ ಉಪಾಧ್ಯಾಯ, ಗೇರುಕಟ್ಟೆ ಗಂಗಯ್ಯ ಶೆಟ್ಟಿ ಮುಂತಾದ ಹಿರಿಯ ಕಲಾವಿದರೊಂದಿಗೆ ಒಡನಾಟದ ಅನುಭವವನ್ನು ಹೊಂದಿದ್ದಾರೆ.
ಮೇ ೧೧, ೨೦೨೨ ಬುಧವಾರ ಪೂರ್ವಾಹ್ನ ೧೧.೦೦ ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ವನ್ನು ಪ್ರಶಸ್ತಿ ಫಲಕ ಮತ್ತು ರೂ. ೫೦,೦೦೦ ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ದಿವಾನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…