Featured

ಉಡುಪಿ :  ಕುರಿಯ ಗಣಪತಿ ಶಾಸ್ತ್ರಿ ಗಳಿಗೆ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ – Vishwanews24

ಉಡುಪಿ :  ಕುರಿಯ ಗಣಪತಿ ಶಾಸ್ತ್ರಿ ಗಳಿಗೆ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ – Vishwanews24

ಉಡುಪಿ : ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನಲ್ಲಿ ಮೂರು ದಶಕಗಳ ಕಾಲ ಭಾಗವತರಾಗಿ, ಅನುಭವಿ ರಂಗ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಶ್ರೀ ಕುರಿಯ ಗಣಪತಿ ಶಾಸ್ತಿçಗಳು ಆಯ್ಕೆಯಾಗಿದ್ದಾರೆ.

ತೆಂಕುತಿಟ್ಟು ಯಕ್ಷಗಾನದ ಗುರುಕುಲವೆಂದು ಮನ್ನಣೆ ಪಡೆದ ಕುರಿಯ ಮನೆತನದವರಾದ ಗಣಪತಿ ಶಾಸ್ತಿçಗಳು, ತಮ್ಮ ದೊಡ್ಡತಂದೆಯವರಾದ ಕುರಿಯ ವಿಠಲ ಶಾಸ್ತ್ರಿಗಳ ಶಿಷ್ಯರಾಗಿ ಪ್ರಸಿದ್ಧ ವೇಷಧಾರಿಯಾಗಿದ್ದವರು. ಅಗರಿ ಶ್ರೀನಿವಾಸ ಭಾಗವತರ ಪ್ರೇರಣೆಯೊಂದಿಗೆ ಭಾಗವತಿಕೆ ಕ್ಷೇತ್ರವನ್ನು ಪ್ರವೇಶಿಸಿದರು.

ಕಟೀಲು ಮೇಳದಲ್ಲಿ ಪ್ರದಾನ ಭಾಗವತರಾಗಿ ಮೂರು ದಶಕಗಳ ವ್ಯವಸಾಯದ ಅವಧಿಯಲ್ಲಿ ನೆಡ್ಲೆ ನರಸಿಂಹ ಭಟ್, ಮರವಂತೆ ನರಸಿಂಹದಾಸ, ಪಡ್ರೆ ಚಂದ್ರು, ಕೇದಗಡಿ ಗುಡ್ಡಪ್ಪ ಗೌಡ, ಮುದುಕುಂಜ ವಾಸುದೇವ ಪ್ರಭು, ಕುಡಾಣ ಗೋಪಾಲ ಭಟ್, ಕೋಡಿ ಕುಷ್ಠ ಗಾಣಿಗ, ಪುಂಡರಿಕಾಕ್ಷ ಉಪಾಧ್ಯಾಯ, ಗೇರುಕಟ್ಟೆ ಗಂಗಯ್ಯ ಶೆಟ್ಟಿ ಮುಂತಾದ ಹಿರಿಯ ಕಲಾವಿದರೊಂದಿಗೆ ಒಡನಾಟದ ಅನುಭವವನ್ನು ಹೊಂದಿದ್ದಾರೆ.

ಮೇ ೧೧, ೨೦೨೨ ಬುಧವಾರ ಪೂರ್ವಾಹ್ನ ೧೧.೦೦ ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ವನ್ನು ಪ್ರಶಸ್ತಿ ಫಲಕ ಮತ್ತು ರೂ. ೫೦,೦೦೦ ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ದಿವಾನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

6 minutes ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

36 minutes ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

46 minutes ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

1 hour ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

1 hour ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

2 hours ago