Featured

ಉಡುಪಿ :  ಕುರಿಯ ಗಣಪತಿ ಶಾಸ್ತ್ರಿ ಗಳಿಗೆ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ – Vishwanews24

ಉಡುಪಿ :  ಕುರಿಯ ಗಣಪತಿ ಶಾಸ್ತ್ರಿ ಗಳಿಗೆ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ’ ಪ್ರಶಸ್ತಿ – Vishwanews24

ಉಡುಪಿ : ಯತಿಶ್ರೇಷ್ಠರಾದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಹೆಸರಿನಲ್ಲಿ ಅವರ ಕರಕಮಲ ಸಂಜಾತ ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹ ಪೂರ್ವಕವಾಗಿ ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ಕ್ಕೆ ತೆಂಕುತಿಟ್ಟಿನಲ್ಲಿ ಮೂರು ದಶಕಗಳ ಕಾಲ ಭಾಗವತರಾಗಿ, ಅನುಭವಿ ರಂಗ ನಿರ್ದೇಶಕರಾಗಿ ಸೇವೆ ಸಲ್ಲಿಸಿದ ಶ್ರೀ ಕುರಿಯ ಗಣಪತಿ ಶಾಸ್ತಿçಗಳು ಆಯ್ಕೆಯಾಗಿದ್ದಾರೆ.

ತೆಂಕುತಿಟ್ಟು ಯಕ್ಷಗಾನದ ಗುರುಕುಲವೆಂದು ಮನ್ನಣೆ ಪಡೆದ ಕುರಿಯ ಮನೆತನದವರಾದ ಗಣಪತಿ ಶಾಸ್ತಿçಗಳು, ತಮ್ಮ ದೊಡ್ಡತಂದೆಯವರಾದ ಕುರಿಯ ವಿಠಲ ಶಾಸ್ತ್ರಿಗಳ ಶಿಷ್ಯರಾಗಿ ಪ್ರಸಿದ್ಧ ವೇಷಧಾರಿಯಾಗಿದ್ದವರು. ಅಗರಿ ಶ್ರೀನಿವಾಸ ಭಾಗವತರ ಪ್ರೇರಣೆಯೊಂದಿಗೆ ಭಾಗವತಿಕೆ ಕ್ಷೇತ್ರವನ್ನು ಪ್ರವೇಶಿಸಿದರು.

ಕಟೀಲು ಮೇಳದಲ್ಲಿ ಪ್ರದಾನ ಭಾಗವತರಾಗಿ ಮೂರು ದಶಕಗಳ ವ್ಯವಸಾಯದ ಅವಧಿಯಲ್ಲಿ ನೆಡ್ಲೆ ನರಸಿಂಹ ಭಟ್, ಮರವಂತೆ ನರಸಿಂಹದಾಸ, ಪಡ್ರೆ ಚಂದ್ರು, ಕೇದಗಡಿ ಗುಡ್ಡಪ್ಪ ಗೌಡ, ಮುದುಕುಂಜ ವಾಸುದೇವ ಪ್ರಭು, ಕುಡಾಣ ಗೋಪಾಲ ಭಟ್, ಕೋಡಿ ಕುಷ್ಠ ಗಾಣಿಗ, ಪುಂಡರಿಕಾಕ್ಷ ಉಪಾಧ್ಯಾಯ, ಗೇರುಕಟ್ಟೆ ಗಂಗಯ್ಯ ಶೆಟ್ಟಿ ಮುಂತಾದ ಹಿರಿಯ ಕಲಾವಿದರೊಂದಿಗೆ ಒಡನಾಟದ ಅನುಭವವನ್ನು ಹೊಂದಿದ್ದಾರೆ.

ಮೇ ೧೧, ೨೦೨೨ ಬುಧವಾರ ಪೂರ್ವಾಹ್ನ ೧೧.೦೦ ಗಂಟೆಗೆ ಪಲಿಮಾರಿನಲ್ಲಿ ಜರಗುವ ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ’ವನ್ನು ಪ್ರಶಸ್ತಿ ಫಲಕ ಮತ್ತು ರೂ. ೫೦,೦೦೦ ನಿಧಿಯೊಂದಿಗೆ ಪ್ರದಾನ ಮಾಡಲಾಗುವುದು ಎಂದು ಪಲಿಮಾರು ಮಠದ ದಿವಾನರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago