ಉಡುಪಿ: ಉಡುಪಿಯ ಕೂರ್ಮ ಫೌಂಡೇಶನ್ ಆಶ್ರಯದಲ್ಲಿ ಫೆ.24ರಂದು ‘ಆಜಾದ್ ಹಿಂದ್ – ಶಿವಾಜಿಯಿಂದ ನೇತಾಜಿವರೆಗೆ’ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಸಂಜೆ 5 ಗಂಟೆಯಿಂದ ನಡೆಯಲಿದೆ ಎಂದು ಕೂರ್ಮ ಫೌಂಡೇಶನ್ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಕಾರ್ಕಳ ತಿಳಿಸಿದ್ದಾರೆ.
ಈ ಬಗ್ಗೆ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಜಾದ್ ಹಿಂದ್ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಮಹಾರಾಷ್ಟ್ರದ ಪ್ರಖ್ಯಾತ ವಾಗ್ಮಿ ಸಂದೀಪ್ ಮಹಿಂದ್ ಹಾಗೂ ರಾಷ್ಟ್ರೀಯವಾದಿ ಪತ್ರಕರ್ತರಾದ ಅಜಿತ್ ಹನುಮಕ್ಕನವರ್ ಅವರು ಭಾಗವಹಿಸಲಿದ್ದಾರೆ. ಗಾಯಕ ರಜತ್ ಮಯ್ಯ ಮತ್ತು ತಂಡದಿಂದ ರಾಷ್ಟ್ರಗೀತೆಗಳು ಸ್ವರಭಾರತಿ ಹಾಗೂ ಮಂಜರಿಚಂದ್ರ ಮತ್ತು ಕಲಾವಿದರಿಂದ ನೃತ್ಯರೂಪಕಗಳು ನಮೋ ನಮೋ ಭಾರತಾಂಬೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಛತ್ರಪತಿ ಶಿವಾಜಿ ಕಂಡ ಹಿಂದವಿ ಸ್ವರಾಜ್ಯದ ಜಾಗೃತಿಗಾಗಿ ಬದುಕನ್ನೇ ಸಮರ್ಪಿಸಿದ ಕ್ರಾಂತಿಕಾರಿ ಸಂತ ಡಾ. ಸಂದೀಪ್ ಮಹಿಂದ್ ಗುರೂಜಿ, ಹಿರಿಯ ಪತ್ರಕರ್ತ ಅಜಿತ್ ಹನುಮನಕ್ಕನವರ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆಜಾದ್ ಹಿಂದ್ ಕಾರ್ಯಕ್ರಮದ ಗೌರವಾಧ್ಯಕ್ಷ ಅಜಯ್ ಪಿ. ಶೆಟ್ಟಿ, ಕೂರ್ಮ ಫೌಂಡೇಶನ್ ಸಂಚಾಲಕ ಸೂರಜ್ ಕಿದಿಯೂರ್, ಕಾರ್ಯದರ್ಶಿ ಪ್ರವೀಣ್ ಯಕ್ಷಿಮಠ, ಕೋಶಾಧಿಕಾರಿ ಸುಜಿತ್ ಶೆಟ್ಟಿ ಉಪಸ್ಥಿತರಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…