Featured

ಉಡುಪಿ : ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿ: ಅರ್ಜಿ ಆಹ್ವಾನ -Vishwanews24

ಉಡುಪಿ : ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿ: ಅರ್ಜಿ ಆಹ್ವಾನ -Vishwanews24

ಉಡುಪಿ : ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪವಾಗಿದ್ದು, ಬೇರೆಯವರ ಸಾಧನೆ ಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರುಗಳು , ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಜೂ.20 ರ ಒಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.

ಕೃಷಿ ಪಂಡಿತ ಪ್ರಶಸ್ತಿಯು ಪ್ರಥಮ ಬಹುಮಾನ ರೂ.1,25,000 ದ್ವಿತೀಯ 1,00,000 ತೃತೀಯ 75,000 ಕೃಷಿ ಪಂಡಿತ ಉದಯೋನ್ಮುಖ ಪ್ರಶಸ್ತಿ 50,000 ರೂ ಗಳನ್ನು ಒಳಗೊಂಡಿರುತ್ತದೆ ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

24 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago