ಉಡುಪಿ : ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ” ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಭಾಗವಹಿಸುವವರ ಸಂಶೋಧನೆ/ಸಾಧನೆಗಳು ಮೂಲ ಸ್ವರೂಪವಾಗಿದ್ದು, ಬೇರೆಯವರ ಸಾಧನೆ ಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರುಗಳು , ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಜೂ.20 ರ ಒಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.
ಕೃಷಿ ಪಂಡಿತ ಪ್ರಶಸ್ತಿಯು ಪ್ರಥಮ ಬಹುಮಾನ ರೂ.1,25,000 ದ್ವಿತೀಯ 1,00,000 ತೃತೀಯ 75,000 ಕೃಷಿ ಪಂಡಿತ ಉದಯೋನ್ಮುಖ ಪ್ರಶಸ್ತಿ 50,000 ರೂ ಗಳನ್ನು ಒಳಗೊಂಡಿರುತ್ತದೆ ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…