ಉಡುಪಿ: ಕೃಷಿ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಂದ ಒಳ್ಳೆ ಕೆಲಸಗಳು ನಡೆಯಲಿ : ಅಶೋಕ್ ಕುಮಾರ್ ಕೊಡವೂರು – -Vishwanews24
ಉಡುಪಿ: ಕೃಷಿ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಂದ ಒಳ್ಳೆ ಕೆಲಸಗಳು ನಡೆಯಲಿ : ಅಶೋಕ್ ಕುಮಾರ್ ಕೊಡವೂರು – -Vishwanews24
ಉಡುಪಿ: ಶೋಭಾ ಕರಂದ್ಲಾಜೆ ಅವರು ಕೃಷಿ ಮಂತ್ರಿಯಾಗಿ ನೇಮಕವಾಗಿದ್ದಾರೆ. ಅವರಿಗೆ ಶುಭಾಶಯ ಕೋರುತ್ತೇನೆ.
ಕೃಷಿ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಂದ ಒಳ್ಳೆ ಕೆಲಸಗಳು ನಡೆಯಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
ಇಡೀ ದೇಶದ ರೈತರು ಬೀದಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಕೃಷಿ ಬಿಲ್ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು.ಕೊರೋನಾ ಸಾಂಕ್ರಾಮಿಕದಿಂದ ಬಳಲುತ್ತಿರುವ ರೈತರಿಗೆ ಸವಲತ್ತುಗಳನ್ನು ಒದಗಿಸಿ ದೇಶದಲ್ಲಿ ನಶಿಸುತ್ತಿರುವ ಕೃಷಿಯನ್ನು ಉಳಿಸುವ ಜವಾಬ್ದಾರಿ ಶೋಭಾ ಕರಂದ್ಲಾಜೆ ಮೇಲಿದೆ.
ಶೋಭಾ ಕರಂದ್ಲಾಜೆ ಮಾಡುವ ಒಳ್ಳೆಯ ಕೆಲಸಗಳಿಗೆ ಬೆಂಬಲವಿದೆ.ಕರ್ತವ್ಯಲೋಪ ಮಾಡಿದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
