Featured

ಉಡುಪಿ:  ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ – vishwanews24

ಉಡುಪಿ:  ಕೃಷಿ ಭಾಗ್ಯ ಯೋಜನೆ: ರೈತರಿಂದ ಅರ್ಜಿ ಆಹ್ವಾನ

ಉಡುಪಿ: ಮಳೆಯಾಶ್ರಿತ ಕೃಷಿ ನೀತಿ ಅನ್ವಯ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನ ಗುರಿಯನ್ನು ಹೊಂದಿ ಅನುಷ್ಠಾನಗೊಂಡಿರುವ ಕೃಷಿ ಭಾಗ್ಯ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮರುಜಾರಿಗೊಳಿಸಲಾಗಿರುತ್ತದೆ. ಅದೇ ರೀತಿ ಕೃಷಿ ಭಾಗ್ಯ- ಎಸ್.ಡಿ.ಎಂ.ಎಫ್ ಯೋಜನೆಯನ್ನು ಜಿಲ್ಲೆಯ ಬರ ಪೀಡಿತ ಬ್ರಹ್ಮಾವರ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗಿರುತ್ತದೆ.ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದ0ತೆ ತಡೆಯಲು ಪಾಲಿಥೀನ್ ಹೊದಿಕೆ, ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಘಟಕಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ, ಸೂಕ್ಷö್ಮ (ತುಂತುರು/ ಹನಿ) ನೀರಾವರಿ ಘಟಕದಡಿ ಎಲ್ಲಾ ವರ್ಗದ ರೈತರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಸಲು ಸಾಮಾನ್ಯ ವರ್ಗದ ರೈತರಿಗೆ ಶೇ. 40 ಹಾಗೂ ಪರಿಶಿಷ್ಟ ಜಾತಿ / ಪಂಗಡದ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲಾಗುವುದು.

ರೈತರುಗಳು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಪಹಣಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago