Featured

ಉಡುಪಿ:  ಕೃಷಿ ಭೂಮಿ 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ ನೀಡುವಂತೆ ಕಂದಾಯ ಸಚಿವರಿಗೆ ಯಶ್ಪಾಲ್ ಸುವರ್ಣ ಮನವಿ – vishwanews24

ಉಡುಪಿ:  ಕೃಷಿ ಭೂಮಿ 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ ನೀಡುವಂತೆ ಕಂದಾಯ ಸಚಿವರಿಗೆ ಯಶ್ಪಾಲ್ ಸುವರ್ಣ ಮನವಿ

ಉಡುಪಿ: ಕೃಷಿ ಭೂಮಿಯನ್ನು 11- ಇ ನಕ್ಷೆ ಮೂಲಕ ವಿಂಗಡನೆಗೆ ಅವಕಾಶ, ಮಳೆ ಹಾನಿ ಪರಿಹಾರ ಹಾಗೂ ವಸತಿ ಯೋಜನೆಯಡಿ ಮಂಜೂರಾದ ಬಾಕಿ ಅನುದಾನ ಬಿಡುಗಡೆಯ ಬಗ್ಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯು ಭೌಗೋಳಿಕವಾಗಿ ಇತರ ಜಿಲ್ಲೆಗಳಿಗಿಂತ ವಿಭಿನ್ನವಾಗಿ ಸಣ್ಣ ಹಾಗೂ ಅತಿ ಸಣ್ಣ ಹಿಡುವಳಿದಾರರಿಂದ ಕೂಡಿದ ಭೂ ಪ್ರದೇಶವಾಗಿದ್ದು ಹಿಂದಿನಿಂದಲೂ ಕಂದಾಯ ನಿಯಮಗಳನ್ನು ರೂಪಿಸುವಾಗ ಉಡುಪಿ ಜಿಲ್ಲೆಯೂ ಸೇರಿದಂತೆ ಅವಿಭಜಿತ ದ.ಕ ಜಿಲ್ಲೆಗೆ ರಿಯಾಯಿತಿ ನೀಡಿಕೊಂಡು ಬರಲಾಗುತ್ತಿದೆ.

ಪ್ರಸ್ತುತ ಸರಕಾರದ ಆದೇಶದಂತೆ ಮನೆ ನಿರ್ಮಾಣಕ್ಕೆ ಭೂ ಪರಿವರ್ತನೆ ಪೂರ್ವದಲ್ಲಿ ಕೃಷಿ ಭೂಮಿಯನ್ನು ವಿಂಗಡಿಸಲು ಕನಿಷ್ಠ 50 ಸೆಂಟ್ಸ್ ಮಿತಿ ನಿಗದಿ ಪಡಿಸಲಾಗಿರುತ್ತದೆ. ಜಿಲ್ಲೆಯಲ್ಲಿ 50 ಸೆಂಟ್ಸ್ ಗಿಂತ ಕಡಿಮೆ ಜಾಗ ಹೊಂದಿರುವ ಸಾವಿರಾರು ರೈತರಿದ್ದು, ಹಲವು ಕಾರಣಗಳಿಗಾಗಿ 11-ಇ ನಕ್ಷೆ ಆಧಾರದಲ್ಲಿ ಜಾಗ ವಿಂಗಡನೆಯು ಅನಿವಾರ್ಯವಾಗಿರುತ್ತದೆ. ಉದಾಹರಣೆಗೆ ಕೃಷಿ ಭೂಮಿ ಹೊಂದಿರುವ ಕುಟುಂಬಗಳು ವಿವಿಧ ಉದ್ದೇಶಗಳಾದ ಕುಟುಂಬದ ಸದಸ್ಯರ ಮದುವೆ, ಮನೆ ನಿರ್ಮಾಣಕ್ಕೆ ಹಣಕಾಸು, ವೈದ್ಯಕೀಯ ವೆಚ್ಚ, ಮತ್ತಿತರ ಅನಿವಾರ್ಯ ಕಾರಣಗಳಿಗಾಗಿ, ಅಗತ್ಯ ಕನಿಷ್ಠ ಜಾಗವನ್ನು ಮಾರಾಟ ಮಾಡುವ ಪ್ರಕ್ರಿಯೆಯು ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುತ್ತದೆ.

ನಗರ ವ್ಯಾಪ್ತಿಯೂ ಸೇರಿದಂತೆ ಗ್ರಾಮೀಣ ಭಾಗದ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂರಾರು ಕುಟುಂಬಗಳು ನಿವೇಶನಕ್ಕಾಗಿ ಗ್ರಾಮ ಪಂಚಾಯತ್ಗೆ ಅರ್ಜಿ ಸಲ್ಲಿಸಿದ್ದು, ಸರಕಾರಿ ಜಾಗದ ಲಭ್ಯತೆಯಿಲ್ಲದೆ ಹಲವಾರು ವರ್ಷಗಳಿಂದ ಸ್ವಂತ ನಿವೇಶನದ ನಿರೀಕ್ಷೆಯಲ್ಲಿದ್ದಾರೆ. ಸದ್ರಿ ಆದೇಶದಿಂದ ಕಡಿಮೆ ದರದಲ್ಲಿ ಸಣ್ಣ ಜಾಗ ಖರೀದಿಸಿ ಮನೆ ನಿರ್ಮಿಸುವ ಉದ್ದೇಶ ಈಡೇರುವುದಿಲ್ಲ. ಸಣ್ಣ ನಿವೇಶನಗಳ ದರ ದುಪ್ಪಟ್ಟಾಗುವುದರೊಂದಿಗೆ ನಿರ್ಮಾಣ ಸಂಬಂಧಿತ ಕಟ್ಟಡ ಕಾರ್ಮಿಕರಿಗೆ, ಕಟ್ಟಡ ಸಾಮಾಗ್ರಿ ಪುರೈಕೆದಾರರಿಗೆ ತೊಂದರೆಯಾಗುವುದರೊಂದಿಗೆ ಪೂರಕ ವಾಣಿಜ್ಯ ಚಟುವಟಿಕೆಗಳಿಗೆ ತೀವ್ರ ಹೊಡೆತ ಬೀಳಲಿದೆ. ಆದುದರಿಂದ, ಉಡುಪಿ ಜಿಲ್ಲೆಗೆ ಮಾತ್ರ ಅನ್ವಯಿಸಿ ಆದೇಶಿಸಲಾಗಿರುವ ಸದ್ರಿ ನಿಯಮವನ್ನು ಹಿಂಪಡೆದು ಹಿಂದಿನಂತೆ 50 ಸೆಂಟ್ಸ್ ಮಿತಿಗೆ ಬದಲಾಗಿ 7.5 ಸೆಂಟ್ಸ್ ಮಿತಿಗೆ ಮರು ಆದೇಶ ಹೊರಡಿಸುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.

ಉಡುಪಿ ತಾಲೂಕಿನಲ್ಲಿ ನೆರೆ ಸಂತ್ರಸ್ತರ ಪುನರ್ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ರಾಜೀವ ಗಾಂಧಿ ವಸತಿ ನಿಗಮದಿಂದ ಅನುದಾನ ಮಂಜೂರಾಗಿ ವರ್ಷಗಳೇ ಕಳೆದರು, ಈವರೆಗೆ ಮಂಜೂರಾದ ಸಂಪೂರ್ಣ ಅನುದಾನ ಬಿಡುಗಡೆಯಾಗಿರುವುದಿಲ್ಲ. ಇದರಿಂದ ಮನೆ ನಿರ್ಮಾಣ ಪೂರ್ಣಗೊಳಿಸಲಾಗದೆ ಅನಾನುಕೂಲವಾಗಿರುತ್ತದೆ. ಆದುದರಿಂದ, ಉಡುಪಿ ತಾಲೂಕಿನ ನೆರೆ ಸಂತ್ರಸ್ಥರ ಪುನರ್ ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ರಾಜೀವ ಗಾಂಧಿ ವಸತಿ ನಿಗಮದಿಂದ ಮಂಜೂರಾಗಿರುವ ಅನುದಾನವನ್ನು ತುರ್ತಾಗಿ ಬಿಡುಗಡೆಗೊಳಿಸಲು ಕ್ರಮ ವಹಿಸಬೇಕು.

ನಿರಂತರ ಮಳೆಯಿಂದಾಗಿ ಜಿಲ್ಲೆಯ ಹಲವು ಪ್ರದೇಶಗಳು ಜಲಾವೃತವಾಗಿದ್ದು, ರಕ್ಷಣಾ ಕಾರ್ಯ, ಪುನರ್ವಸತಿ ಕೆಲಸಗಳು ಚುರುಕಾಗಿ ನಡೆಯುತ್ತಿದೆ. ಸಮುದ್ರ ತೀರದಲ್ಲಿ ಕಡಲು ಕೊರೆತದ ಸಮಸ್ಯೆ ಹಲವೆಡೆ ಕಾಣಿಸಿಕೊಂಡಿದೆ. ಸುಂಟರಗಾಳಿ ಮತ್ತು ವಿಪರೀತ ಮಳೆಯಿಂದಾಗಿ ನೂರಾರು ಮರಗಳು ಬಿದ್ದು, ವಿದ್ಯುತ್ ಕಂಬಗಳಿಗೆ, ಮನೆಗಳಿಗೆ ಹಾನಿಯಾಗಿದ್ದು, ರಸ್ತೆ, ಮೋರಿ, ಶಾಲಾ ಕಟ್ಟಡಗಳು, ಕಾಲುಸಂಕಗಳು ಹಾಗೂ ಸೇತುವೆಗಳು ಅಪಾಯದಲ್ಲಿವೆ. ಪ್ರಾಕೃತಿಕ ವಿಕೋಪದಡಿ ಅನುದಾನ ಬಿಡುಗಡೆಯಾಗದೆ, ಗ್ರಾಮೀಣ ರಸ್ತೆಗಳ ನಿರ್ವಹಣೆಯಿಲ್ಲದೆ ಸಂಚಾರ ದುಸ್ತರವಾಗಿದೆ. ಆದುದರಿಂದ, ಸಂತ್ರಸ್ತರಿಗೆ ಪರಿಹಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ರಕ್ಷಣೆಗೆ ಹಾಗೂ ದುರಸ್ತಿಗೆ ಸಾಕಷ್ಟು ಅನುದಾನದ ಅಗತ್ಯವಿದ್ದು, ಈ ಬಗ್ಗೆ ವಿಶೇಷ ಅನುದಾನವನ್ನು ಪ್ರಾಕೃತಿಕ ವಿಕೋಪದಡಿ ಉಡುಪಿ ಜಿಲ್ಲೆಗೆ ಸರಕಾರದಿಂದ ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago