ಉಡುಪಿ : ಕೃಷಿ ಲಾಭದಾಯಕವಲ್ಲ ಎಂಬ ಕಾರಣದಿಂದ ಹಲವು ರೈತರು ತಮ್ಮ ಭೂಮಿಯನ್ನು ಹಡಿಲು ಬಿಡುತ್ತಿದ್ದು, ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರು ಈ ಯೋಜನೆಗಳ ಪ್ರಯೋಜನೆ ಪಡೆಯುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ಇಂದು ಕಡೆಕಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಡಿಲು ಭೂಮಿ ಕೃಷಿ ಗದ್ದೆಗಳಲ್ಲಿನ ಕಳೆ ತೆಗೆಯುವ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು.
ಸಣ್ಣ ಮತ್ತು ಮಧ್ಯಮ ರೈತರು ಕೃಷಿ ಚಟುವಟಿಕೆಗಳಿಂದ ವಿಮುಖರಾದಗಂತೆ ತಡೆಯಲು ಪ್ರಧಾನಮಂತ್ರಿಗಳು, ಯಂತ್ರೋಪಕರಣ ಬಾಡಿಗೆ ಕೇಂದ್ರಗಳು, ಕೃಷಿ ಸಿಂಚಾಯಿ ಯೋಜನೆ ಮೂಲಕ ಹನಿ ನೀರಾವರಿ ಉತ್ತೇಜನ, ರಸಗೊಬ್ಬರದ ಗುಣಮಟ್ಟದ ಏರಿಕೆ, ಪರಂಪರಾಗತ ಕೃಷಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿ, ಸಾವಯವ ಹಾಗೂ ನೈಸರ್ಗಿಕ ಕೃಷಿಗೆ ಆದ್ಯತೆ ನೀಡಲಾಗುತ್ತಿದೆ. ವಿದೇಶದಲ್ಲಿ ನೈಸರ್ಗಿಕವಾಗಿ ಬೆಳೆದ ಸಾವಯವ ಆಹಾರ ಪದಾರ್ಥಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ನಮ್ಮಲ್ಲಿ ಬೆಳೆದಂತಹ ಆಹಾರ-ಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರಿಂದ ರೈತರಿಗೂ ಹೆಚ್ಚಿನ ಲಾಭಪಡೆಯಬಹುದು ಎಂದರು.
ಸಣ್ಣ ಕೃಷಿಕರು, ಭೂಮಿಯ ಒಡೆತನ ಹೊಂದಿರುವoತಹ ಕೃಷಿಕರಿಗೆಲ್ಲರಿಗೂ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಪ್ರಧಾನಿಯವರು ವರ್ಷಕ್ಕೆ 6,000ರೂ.ಗಳನ್ನು ನೇರವಾಗಿ ಕೃಷಿಕರ ಖಾತೆಗೆ ಹಾಕುತ್ತಿದ್ದಾರೆ. ಇದನ್ನು ಕೃಷಿಯ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೃಷಿ ಉತ್ಪಾದಕ ಸಂಘಗಳನ್ನು ಆರಂಭಿಸುವAತೆ ತಿಳಿಸಿದ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೆಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಯೋಜನೆಗಳ ಪ್ರಯೋಜನ ಪಡೆಯುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ಬೆಳೆ ಸಮೀಕ್ಷೆ ಆ್ಯಪ್ ಬಳಕೆ ವಿಧಾನ ಮತ್ತು ಅದರ ಪ್ರಯೋಜನ ಕುರಿತು ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ರಘುಪತಿ ಭಟ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಮೋಹನ್ ರಾಜ್, ಕೃಷಿ ಇಲಾಖೆ ಹಾಗೂ ಬ್ರಹ್ಮಾವರ ಕೃಷಿ ಕೇಂದ್ರದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…