Featured

ಉಡುಪಿ : ಕೃಷಿ ಲಾಭದಾಯಕ ಮಾಡಲು ವಿವಿಧ ಯೋಜನೆ : ಸಚಿವೆ ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕೃಷಿ ಲಾಭದಾಯಕ ಮಾಡಲು ವಿವಿಧ ಯೋಜನೆ : ಸಚಿವೆ ಶೋಭಾ ಕರಂದ್ಲಾಜೆ -Vishwanews24

ಉಡುಪಿ : ಕೃಷಿ ಲಾಭದಾಯಕವಲ್ಲ ಎಂಬ ಕಾರಣದಿಂದ ಹಲವು ರೈತರು ತಮ್ಮ ಭೂಮಿಯನ್ನು ಹಡಿಲು ಬಿಡುತ್ತಿದ್ದು, ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ರೈತರು ಈ ಯೋಜನೆಗಳ ಪ್ರಯೋಜನೆ ಪಡೆಯುವಂತೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಇಂದು ಕಡೆಕಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಡಿಲು ಭೂಮಿ ಕೃಷಿ ಗದ್ದೆಗಳಲ್ಲಿನ ಕಳೆ ತೆಗೆಯುವ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು.

ಸಣ್ಣ ಮತ್ತು ಮಧ್ಯಮ ರೈತರು ಕೃಷಿ ಚಟುವಟಿಕೆಗಳಿಂದ ವಿಮುಖರಾದಗಂತೆ ತಡೆಯಲು ಪ್ರಧಾನಮಂತ್ರಿಗಳು, ಯಂತ್ರೋಪಕರಣ ಬಾಡಿಗೆ ಕೇಂದ್ರಗಳು, ಕೃಷಿ ಸಿಂಚಾಯಿ ಯೋಜನೆ ಮೂಲಕ ಹನಿ ನೀರಾವರಿ ಉತ್ತೇಜನ, ರಸಗೊಬ್ಬರದ ಗುಣಮಟ್ಟದ ಏರಿಕೆ, ಪರಂಪರಾಗತ ಕೃಷಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿ, ಸಾವಯವ ಹಾಗೂ ನೈಸರ್ಗಿಕ ಕೃಷಿಗೆ ಆದ್ಯತೆ ನೀಡಲಾಗುತ್ತಿದೆ. ವಿದೇಶದಲ್ಲಿ ನೈಸರ್ಗಿಕವಾಗಿ ಬೆಳೆದ ಸಾವಯವ ಆಹಾರ ಪದಾರ್ಥಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ನಮ್ಮಲ್ಲಿ ಬೆಳೆದಂತಹ ಆಹಾರ-ಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರಿಂದ ರೈತರಿಗೂ ಹೆಚ್ಚಿನ ಲಾಭಪಡೆಯಬಹುದು ಎಂದರು.

ಸಣ್ಣ ಕೃಷಿಕರು, ಭೂಮಿಯ ಒಡೆತನ ಹೊಂದಿರುವoತಹ ಕೃಷಿಕರಿಗೆಲ್ಲರಿಗೂ ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಪ್ರಧಾನಿಯವರು ವರ್ಷಕ್ಕೆ 6,000ರೂ.ಗಳನ್ನು ನೇರವಾಗಿ ಕೃಷಿಕರ ಖಾತೆಗೆ ಹಾಕುತ್ತಿದ್ದಾರೆ. ಇದನ್ನು ಕೃಷಿಯ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೃಷಿ ಉತ್ಪಾದಕ ಸಂಘಗಳನ್ನು ಆರಂಭಿಸುವAತೆ ತಿಳಿಸಿದ ಅವರು ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೆಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು ಯೋಜನೆಗಳ ಪ್ರಯೋಜನ ಪಡೆಯುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯ ಬೆಳೆ ಸಮೀಕ್ಷೆ ಆ್ಯಪ್ ಬಳಕೆ ವಿಧಾನ ಮತ್ತು ಅದರ ಪ್ರಯೋಜನ ಕುರಿತು ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅದ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ರಘುಪತಿ ಭಟ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಮೋಹನ್ ರಾಜ್, ಕೃಷಿ ಇಲಾಖೆ ಹಾಗೂ ಬ್ರಹ್ಮಾವರ ಕೃಷಿ ಕೇಂದ್ರದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

9 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

15 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago