ಉಡುಪಿ: ಕೃಷ್ಣನಗರಿಯಲ್ಲಿ ಇಂದು ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿ ನೆರವೇರುತ್ತಿದ್ದು, ನಾಳೆ ವಿಟ್ಲಪಿಂಡಿ ಉತ್ಸವಕ್ಕೆ ನಡೆಯಲಿದೆ. ಇನ್ನು ಮೊಸರು ಕುಡಿಕೆ ಉತ್ಸವ ನೋಡುವುದಕ್ಕೆಂದೇ ಉಡುಪಿ ಮಾತ್ರವಲ್ಲದೇ ನಾನಾ ಭಾಗಗಳಿಂದ ಸಾವಿರಾರು ಮಂದಿ ಸೇರಿದ್ದಾರೆ. ಕೊರೋನಾ ಕಾರಣದಿಂದ ಎರಡು ವರ್ಷಗಳಲ್ಲಿ ಸರಳವಾಗಿ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ ಆಚರಿಸಲಾಗಿತ್ತು. ಈ ವರ್ಷ ಅದ್ಧೂರಿಯಾಗಿ ನಡೆಯುತ್ತಿದೆ.
ಶ್ರೀ ಕೃಷ್ಣ ಮಠದಲ್ಲಿ ದೇವರಿಗೆ ವಿಶೇಷ ಪೂಜೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಇಂದು ಬೆಳಗ್ಗೆ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಲಕ್ಷತುಳಸಿ ಅರ್ಚನೆ ನಡೆಸಿ ,ಮಹಾಪೂಜೆ ನೆರವೇರಿಸಲಿದ್ದಾರೆ.
19ರಂದು ಮಧ್ಯರಾತ್ರಿ ಶುಭ ಮೂಹೂರ್ತದಲ್ಲಿ ಕೃಷ್ಣನಿಗೆ ಅರ್ಘ್ಯ ಪ್ರದಾನ ನಡೆಯಲಿದೆ. 20ರಂದು ಮಧ್ಯಾಹ್ನ ರಥಬೀದಿಯಲ್ಲಿ ವಿಟ್ಲಪಿಂಡಿ ಉತ್ಸವಕ್ಕೆ ಪರ್ಯಾಯ ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಚಾಲನೆ ನೀಡಲಿದ್ದಾರೆ.
ಅಂದು ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಚಿನ್ನದ ರಥದಲ್ಲಿ ಪ್ರತಿಷ್ಠಾಪಿಸಿ ಮೆರವಣಿಗೆ ಮಾಡಲಾಗುತ್ತದೆ. ಸಾಂಪ್ರದಾಯಿಕ ಮೊಸರು ಕುಡಿಕೆ ಒಡೆಯುವ ದೃಶ್ಯ ನೋಡಲು ಸಾವಿರಾರು ಭಕ್ತರು ಆಗಮಿಸುತ್ತಾರೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…