Featured

ಉಡುಪಿ : ಕೃಷ್ಣನಗರಿಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ – Vishwanews24

ಉಡುಪಿ : ಕೃಷ್ಣನಗರಿಯಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್‌ 20ರ ಶನಿವಾರ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು.

ಮುಂಜಾವಿನ 2.21ರ ವೇಳೆಗೆ ಶ್ರೀ ಕೃಷ್ಣ ದೇವರಿಗೆ ಎಲ್ಲಾ ಮಠಗಳ ಮುಖ್ಯಸ್ಥರ ಸಮ್ಮುಖದಲ್ಲಿ ಕೃಷ್ಣಾಪುರ ಮಠದ ಪರ್ಯಾಯ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಭಗವಾನ್ ಶ್ರೀ ಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಿದರು.

ಮಧ್ಯಾಹ್ನದ ಬಳಿಕ ಉಡುಪಿ ರಥಬೀದಿಯಲ್ಲಿ ಸಾಂಪ್ರದಾಯಿಕ ವಿಟ್ಲ ಪಿಂಡಿ ಉತ್ಸವ ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದೆ. ಈ ವೇಳೆ ಹುಲಿವೇಷ ತಂಡಗಳು ಮತ್ತು ಇತರ ಮನರಂಜನಾ ತಂಡಗಳು ಆಗಮಿಸಲಿವೆ.

ಬಳಿಕ ಶ್ರೀ ಕೃಷ್ಣ ದೇವರಿಗೆ ವಿವಿಧ ಪೂಜಾವಿಧಿಗಳು ಜರಗಲಿವೆ. ಕೃಷ್ಣಾಪುರ ಮಠದ ಪರ್ಯಾಯ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಮತ್ತು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ಮುಂದಾಳತ್ವದಲ್ಲಿ ತುಳಸಿ ದಳ ಅರ್ಪಣೆ, ಮಹಾಪೂಜೆ ಸೇರಿದಂತೆ ವಿವಿಧ ಪೂಜೆಗಳು ಜರಗಲಿವೆ. ಬಳಿಕ ಆರ್ಘ್ಯ ಪ್ರದಾನ ನಡೆಯಲಿದೆ.

ಉಡುಪಿ: ಕೃಷ್ಣನಗರಿಯಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ : ನಾಳೆ ವಿಟ್ಲಪಿಂಡಿ ಉತ್ಸವ – Vishwanews24

Vishwa News 24

Recent Posts

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

3 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

11 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

18 hours ago