ಉಡುಪಿ:ಕೃಷ್ಣನ ಊರಾದ ಉಡುಪಿಯಲ್ಲಿ ವಿಶೇಷ ಪೂಜೆಗಳ ಮೂಲಕ ವೈಭವದಿಂದ ಕೃಷ್ಣ ಜನ್ಮಾಷ್ಟಮಿ ನಡೆಸಲಾಗುತ್ತಿದೆ. ಉಡುಪಿಯ ಶ್ರೀಕೃಷ್ಣ ಜನ್ಮಾಷ್ಟಮಿಗೂ ಹುಲಿವೇಷ ಕುಣಿತಕ್ಕೂ ಅವಿನಾಭವ ಸಂಬಂಧ. ವಿಟ್ಲಪಿಂಡಿ ಉತ್ಸವದ ದಿನ ಶ್ರೀಕೃಷ್ಣ ಮಠದ ಪರಿಸರದಲ್ಲಿ ಹುಲಿವೇಷಧಾರಿಗಳ ಕುಣಿತವನ್ನು ನೋಡುವುದೇ ಕಣ್ಣಿಗೆ ಹಬ್ಬ.. ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿಗೆ ಪೊಡವಿಗೊಡೆಯನ ನಾಡು ಉಡುಪಿ ಸಜ್ಜಾಗಿದೆ.
ಕೃಷ್ಣನ ಜನ್ಮಜಯಂತಿ ಆರಾಧನೆಗೆ ರಥಬೀದಿ ಶೃಂಗಾರಗೊಂಡಿದೆ. ರಾಜ್ಯದ ವಿವಿಧ ಭಾಗಗಳಿಂದ ಉತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಶ್ರೀ ಕೃಷ್ಣಮಠ ವಸತಿಗೃಹ ಸೇರಿದಂತೆ ನಗರದ ವಸತಿಗೃಹಗಳು ಭರ್ತಿಯಾಗುತ್ತಿವೆ. ತಿಂಗಳ ಹಿಂದೆಯೇ ಭಕ್ತರು ಕೊಠಡಿಗಳನ್ನು ಕಾಯ್ದಿರಿಸಿಕೊಂಡಿದ್ದರು.
23ರಂದು ಕೃಷ್ಣ ಜಯಂತಿ, 24ರಂದು ಕೃಷ್ಣ ಜನನದ ಸಂಭ್ರಮಾಚರಣೆ ಶ್ರೀಕೃಷ್ಣಲೀಲೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಕೃಷ್ಣಮಠ ರಥಬೀದಿ ಸಂಭ್ರಮಕ್ಕೆ ವೇದಿಕೆಯಾಗಿದ್ದು, ನಗರದಲ್ಲಿ ವೇಷಧಾರಿಗಳ ಕಲರವ, ಹೂ ವ್ಯಾಪಾರಿಗಳ ಚಟುವಟಿಕೆ ವೇಗ ಪಡೆದುಕೊಂಡಿದೆ.
ವಿಟ್ಲಪಿಂಡಿ ಉತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಮೊಸರುಕುಡಿಕೆ. ಅಷ್ಟ ಮಠಗಳ ರಥಬೀದಿಯಲ್ಲಿ ಗುರ್ಜಿ ಸಿದ್ಧಗೊಂಡಿದೆ. ರಥಬೀದಿಯಲ್ಲಿ ತ್ರಿಕೋನಾಕೃತಿ ಗುರ್ಜಿಗಳನ್ನು ನಿರ್ಮಿಸಿ ಮೊಸರು ಕುಡಿಕೆಗೆ ಸಿದ್ಧತೆ ಮಾಡಲಾಗಿದೆ. ಮಠದ ಆವರಣದಲ್ಲಿ ಮಡಿಕೆಗಳಿಗೆ ಬಣ್ಣ ಬಳಿಯುವ ಕಾರ್ಯದಲ್ಲಿ ಕಲಾವಿದರು ನಿರತರಾಗಿದ್ದಾರೆ.
ಜಾಹಿರಾತು
ಪರ್ಯಾಯ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಆ.23ರಂದು ಬೆಳಗ್ಗೆ ಮಹಾಪೂಜೆ ನಡೆಯಲಿದೆ. ಸಹಸ್ರ ವಿಷ್ಣು ಪರಾಯಣ, ಲಕ್ಷ ತುಳಸಿ ಅರ್ಚನೆ ಶ್ರೀಕೃಷ್ಣನಿಗೆ ಸಮರ್ಪಣೆಯಾಗಲಿದೆ. ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಸಂತ ಮಂಟಪದಲ್ಲಿ ಭಜನಾ ಕಾರ್ಯಕ್ರಮ, ಬೆಳಗ್ಗೆ 12ರಿಂದ 4ರವರೆಗೆ ಓಲಗ ಮಂಟಪದಲ್ಲಿ ಪುತ್ತಿಗೆ ಚಂದ್ರಶೇಖರ್ ಬಳಗದಿಂದ ಸ್ಯಾಕ್ಸೋಫೋನ್ ವಾದನ ಜರುಗಲಿದೆ. ಮಧ್ಯರಾತ್ರಿ 12.12ಕ್ಕೆ ಶ್ರೀಕೃಷ್ಣ ದೇವರಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಆ.24ರಂದು ಬೆಳಗ್ಗೆ ಮಹಾಪೂಜೆ, ಬೆಳಗ್ಗೆ 9ರಿಂದ 12ರವರೆಗೆ ಸೂರ್ಯ ಶಾಲೆಯಲ್ಲಿ ವಿಪಂಚಿ ಬಳಗ ಮಣಿಪಾಲ ಇವರಿಂದ ಪಂಚವೀಣಾ ವಾದನ. ವಸಂತ ಮಂಟಪದಲ್ಲಿ 10 ಗಂಟೆಗೆ ಮಹಿಳಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಭಕ್ತರಿಗೆ ವಿಶೇಷ ಹಾಲು ಪಾಯಸದ ಅನ್ನಸಂತರ್ಪಣೆ ನಡೆಯಲಿದೆ. 3.30ಕ್ಕೆ ಶ್ರೀಕೃಷ್ಣನ ಮಣ್ಣಿನ ಮೂರ್ತಿಯೊಂದಿಗೆ ಬೃಹತ್ ಶ್ರೀಕೃಷ್ಣ ಲೀಲೋತ್ಸವ ಮೆರವಣಿಗೆ ವಿಟ್ಲಪಿಂಡಿ ಸಂಭ್ರಮ ನಡೆಯಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…