Featured

ಉಡುಪಿ: ಕೃಷ್ಣನ ನಾಡಿನಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ -Vishwanews24

ಉಡುಪಿ:ಕೃಷ್ಣನ ಊರಾದ ಉಡುಪಿಯಲ್ಲಿ ವಿಶೇಷ ಪೂಜೆಗಳ ಮೂಲಕ ವೈಭವದಿಂದ ಕೃಷ್ಣ ಜನ್ಮಾಷ್ಟಮಿ ನಡೆಸಲಾಗುತ್ತಿದೆ. ಉಡುಪಿಯ ಶ್ರೀಕೃಷ್ಣ ಜನ್ಮಾಷ್ಟಮಿಗೂ ಹುಲಿವೇಷ ಕುಣಿತಕ್ಕೂ ಅವಿನಾಭವ ಸಂಬಂಧ. ವಿಟ್ಲಪಿಂಡಿ ಉತ್ಸವದ ದಿನ ಶ್ರೀಕೃಷ್ಣ ಮಠದ ಪರಿಸರದಲ್ಲಿ ಹುಲಿವೇಷಧಾರಿಗಳ ಕುಣಿತವನ್ನು ನೋಡುವುದೇ ಕಣ್ಣಿಗೆ ಹಬ್ಬ.. ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿಗೆ ಪೊಡವಿಗೊಡೆಯನ ನಾಡು ಉಡುಪಿ ಸಜ್ಜಾಗಿದೆ.

ಕೃಷ್ಣನ ಜನ್ಮಜಯಂತಿ ಆರಾಧನೆಗೆ ರಥಬೀದಿ ಶೃಂಗಾರಗೊಂಡಿದೆ. ರಾಜ್ಯದ ವಿವಿಧ ಭಾಗಗಳಿಂದ ಉತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಶ್ರೀ ಕೃಷ್ಣಮಠ ವಸತಿಗೃಹ ಸೇರಿದಂತೆ ನಗರದ ವಸತಿಗೃಹಗಳು ಭರ್ತಿಯಾಗುತ್ತಿವೆ. ತಿಂಗಳ ಹಿಂದೆಯೇ ಭಕ್ತರು ಕೊಠಡಿಗಳನ್ನು ಕಾಯ್ದಿರಿಸಿಕೊಂಡಿದ್ದರು.
23ರಂದು ಕೃಷ್ಣ ಜಯಂತಿ, 24ರಂದು ಕೃಷ್ಣ ಜನನದ ಸಂಭ್ರಮಾಚರಣೆ ಶ್ರೀಕೃಷ್ಣಲೀಲೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಕೃಷ್ಣಮಠ ರಥಬೀದಿ ಸಂಭ್ರಮಕ್ಕೆ ವೇದಿಕೆಯಾಗಿದ್ದು, ನಗರದಲ್ಲಿ ವೇಷಧಾರಿಗಳ ಕಲರವ, ಹೂ ವ್ಯಾಪಾರಿಗಳ ಚಟುವಟಿಕೆ ವೇಗ ಪಡೆದುಕೊಂಡಿದೆ.

ವಿಟ್ಲಪಿಂಡಿ ಉತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಮೊಸರುಕುಡಿಕೆ. ಅಷ್ಟ ಮಠಗಳ ರಥಬೀದಿಯಲ್ಲಿ ಗುರ್ಜಿ ಸಿದ್ಧಗೊಂಡಿದೆ. ರಥಬೀದಿಯಲ್ಲಿ ತ್ರಿಕೋನಾಕೃತಿ ಗುರ್ಜಿಗಳನ್ನು ನಿರ್ಮಿಸಿ ಮೊಸರು ಕುಡಿಕೆಗೆ ಸಿದ್ಧತೆ ಮಾಡಲಾಗಿದೆ. ಮಠದ ಆವರಣದಲ್ಲಿ ಮಡಿಕೆಗಳಿಗೆ ಬಣ್ಣ ಬಳಿಯುವ ಕಾರ್ಯದಲ್ಲಿ ಕಲಾವಿದರು ನಿರತರಾಗಿದ್ದಾರೆ.

ಜಾಹಿರಾತು

ಪರ್ಯಾಯ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಆ.23ರಂದು ಬೆಳಗ್ಗೆ ಮಹಾಪೂಜೆ ನಡೆಯಲಿದೆ. ಸಹಸ್ರ ವಿಷ್ಣು ಪರಾಯಣ, ಲಕ್ಷ ತುಳಸಿ ಅರ್ಚನೆ ಶ್ರೀಕೃಷ್ಣನಿಗೆ ಸಮರ್ಪಣೆಯಾಗಲಿದೆ. ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಸಂತ ಮಂಟಪದಲ್ಲಿ ಭಜನಾ ಕಾರ್ಯಕ್ರಮ, ಬೆಳಗ್ಗೆ 12ರಿಂದ 4ರವರೆಗೆ ಓಲಗ ಮಂಟಪದಲ್ಲಿ ಪುತ್ತಿಗೆ ಚಂದ್ರಶೇಖರ್ ಬಳಗದಿಂದ ಸ್ಯಾಕ್ಸೋಫೋನ್ ವಾದನ ಜರುಗಲಿದೆ. ಮಧ್ಯರಾತ್ರಿ 12.12ಕ್ಕೆ ಶ್ರೀಕೃಷ್ಣ ದೇವರಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಆ.24ರಂದು ಬೆಳಗ್ಗೆ ಮಹಾಪೂಜೆ, ಬೆಳಗ್ಗೆ 9ರಿಂದ 12ರವರೆಗೆ ಸೂರ್ಯ ಶಾಲೆಯಲ್ಲಿ ವಿಪಂಚಿ ಬಳಗ ಮಣಿಪಾಲ ಇವರಿಂದ ಪಂಚವೀಣಾ ವಾದನ. ವಸಂತ ಮಂಟಪದಲ್ಲಿ 10 ಗಂಟೆಗೆ ಮಹಿಳಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಭಕ್ತರಿಗೆ ವಿಶೇಷ ಹಾಲು ಪಾಯಸದ ಅನ್ನಸಂತರ್ಪಣೆ ನಡೆಯಲಿದೆ. 3.30ಕ್ಕೆ ಶ್ರೀಕೃಷ್ಣನ ಮಣ್ಣಿನ ಮೂರ್ತಿಯೊಂದಿಗೆ ಬೃಹತ್ ಶ್ರೀಕೃಷ್ಣ ಲೀಲೋತ್ಸವ ಮೆರವಣಿಗೆ ವಿಟ್ಲಪಿಂಡಿ ಸಂಭ್ರಮ ನಡೆಯಲಿದೆ.

 

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago