Featured

ಉಡುಪಿ: ಕೃಷ್ಣನ ನಾಡಿನಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ -Vishwanews24

ಉಡುಪಿ:ಕೃಷ್ಣನ ಊರಾದ ಉಡುಪಿಯಲ್ಲಿ ವಿಶೇಷ ಪೂಜೆಗಳ ಮೂಲಕ ವೈಭವದಿಂದ ಕೃಷ್ಣ ಜನ್ಮಾಷ್ಟಮಿ ನಡೆಸಲಾಗುತ್ತಿದೆ. ಉಡುಪಿಯ ಶ್ರೀಕೃಷ್ಣ ಜನ್ಮಾಷ್ಟಮಿಗೂ ಹುಲಿವೇಷ ಕುಣಿತಕ್ಕೂ ಅವಿನಾಭವ ಸಂಬಂಧ. ವಿಟ್ಲಪಿಂಡಿ ಉತ್ಸವದ ದಿನ ಶ್ರೀಕೃಷ್ಣ ಮಠದ ಪರಿಸರದಲ್ಲಿ ಹುಲಿವೇಷಧಾರಿಗಳ ಕುಣಿತವನ್ನು ನೋಡುವುದೇ ಕಣ್ಣಿಗೆ ಹಬ್ಬ.. ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿಗೆ ಪೊಡವಿಗೊಡೆಯನ ನಾಡು ಉಡುಪಿ ಸಜ್ಜಾಗಿದೆ.

ಕೃಷ್ಣನ ಜನ್ಮಜಯಂತಿ ಆರಾಧನೆಗೆ ರಥಬೀದಿ ಶೃಂಗಾರಗೊಂಡಿದೆ. ರಾಜ್ಯದ ವಿವಿಧ ಭಾಗಗಳಿಂದ ಉತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಶ್ರೀ ಕೃಷ್ಣಮಠ ವಸತಿಗೃಹ ಸೇರಿದಂತೆ ನಗರದ ವಸತಿಗೃಹಗಳು ಭರ್ತಿಯಾಗುತ್ತಿವೆ. ತಿಂಗಳ ಹಿಂದೆಯೇ ಭಕ್ತರು ಕೊಠಡಿಗಳನ್ನು ಕಾಯ್ದಿರಿಸಿಕೊಂಡಿದ್ದರು.
23ರಂದು ಕೃಷ್ಣ ಜಯಂತಿ, 24ರಂದು ಕೃಷ್ಣ ಜನನದ ಸಂಭ್ರಮಾಚರಣೆ ಶ್ರೀಕೃಷ್ಣಲೀಲೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಕೃಷ್ಣಮಠ ರಥಬೀದಿ ಸಂಭ್ರಮಕ್ಕೆ ವೇದಿಕೆಯಾಗಿದ್ದು, ನಗರದಲ್ಲಿ ವೇಷಧಾರಿಗಳ ಕಲರವ, ಹೂ ವ್ಯಾಪಾರಿಗಳ ಚಟುವಟಿಕೆ ವೇಗ ಪಡೆದುಕೊಂಡಿದೆ.

ವಿಟ್ಲಪಿಂಡಿ ಉತ್ಸವದಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಮೊಸರುಕುಡಿಕೆ. ಅಷ್ಟ ಮಠಗಳ ರಥಬೀದಿಯಲ್ಲಿ ಗುರ್ಜಿ ಸಿದ್ಧಗೊಂಡಿದೆ. ರಥಬೀದಿಯಲ್ಲಿ ತ್ರಿಕೋನಾಕೃತಿ ಗುರ್ಜಿಗಳನ್ನು ನಿರ್ಮಿಸಿ ಮೊಸರು ಕುಡಿಕೆಗೆ ಸಿದ್ಧತೆ ಮಾಡಲಾಗಿದೆ. ಮಠದ ಆವರಣದಲ್ಲಿ ಮಡಿಕೆಗಳಿಗೆ ಬಣ್ಣ ಬಳಿಯುವ ಕಾರ್ಯದಲ್ಲಿ ಕಲಾವಿದರು ನಿರತರಾಗಿದ್ದಾರೆ.

ಜಾಹಿರಾತು

ಪರ್ಯಾಯ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ಆ.23ರಂದು ಬೆಳಗ್ಗೆ ಮಹಾಪೂಜೆ ನಡೆಯಲಿದೆ. ಸಹಸ್ರ ವಿಷ್ಣು ಪರಾಯಣ, ಲಕ್ಷ ತುಳಸಿ ಅರ್ಚನೆ ಶ್ರೀಕೃಷ್ಣನಿಗೆ ಸಮರ್ಪಣೆಯಾಗಲಿದೆ. ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಸಂತ ಮಂಟಪದಲ್ಲಿ ಭಜನಾ ಕಾರ್ಯಕ್ರಮ, ಬೆಳಗ್ಗೆ 12ರಿಂದ 4ರವರೆಗೆ ಓಲಗ ಮಂಟಪದಲ್ಲಿ ಪುತ್ತಿಗೆ ಚಂದ್ರಶೇಖರ್ ಬಳಗದಿಂದ ಸ್ಯಾಕ್ಸೋಫೋನ್ ವಾದನ ಜರುಗಲಿದೆ. ಮಧ್ಯರಾತ್ರಿ 12.12ಕ್ಕೆ ಶ್ರೀಕೃಷ್ಣ ದೇವರಿಗೆ ಅರ್ಘ್ಯ ಪ್ರದಾನ ನಡೆಯಲಿದೆ. ಆ.24ರಂದು ಬೆಳಗ್ಗೆ ಮಹಾಪೂಜೆ, ಬೆಳಗ್ಗೆ 9ರಿಂದ 12ರವರೆಗೆ ಸೂರ್ಯ ಶಾಲೆಯಲ್ಲಿ ವಿಪಂಚಿ ಬಳಗ ಮಣಿಪಾಲ ಇವರಿಂದ ಪಂಚವೀಣಾ ವಾದನ. ವಸಂತ ಮಂಟಪದಲ್ಲಿ 10 ಗಂಟೆಗೆ ಮಹಿಳಾ ತಂಡಗಳಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಭಕ್ತರಿಗೆ ವಿಶೇಷ ಹಾಲು ಪಾಯಸದ ಅನ್ನಸಂತರ್ಪಣೆ ನಡೆಯಲಿದೆ. 3.30ಕ್ಕೆ ಶ್ರೀಕೃಷ್ಣನ ಮಣ್ಣಿನ ಮೂರ್ತಿಯೊಂದಿಗೆ ಬೃಹತ್ ಶ್ರೀಕೃಷ್ಣ ಲೀಲೋತ್ಸವ ಮೆರವಣಿಗೆ ವಿಟ್ಲಪಿಂಡಿ ಸಂಭ್ರಮ ನಡೆಯಲಿದೆ.

 

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago