ಉಡುಪಿ : ಕೃಷ್ಣಮಠದಲ್ಲಿ ನಿತ್ಯಪೂಜೆ ಹೊರತು ಭಕ್ತರ ಸೇವೆ ಸ್ವೀಕಾರ ಇಲ್ಲ -Vishwanews24

ಉಡುಪಿ:ಕೊರೊನಾ ಸೋಂಕು ಹರಡುವಿಕೆಯ ತಡೆಗೆ ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಭಕ್ತರಿಂದ ಸೇವೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

ಕೋರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಯವರ ಆದೇಶದ ಮೇರೆಗೆ ಉಡುಪಿ ಜಿಲ್ಲೆಯ ಎಲ್ಲ ದೇವಸ್ಥಾನಗಳ್ಳಲ್ಲಿ ನಿತ್ಯ ಪೂಜೆ ಹೊರತು ಇನ್ನಿತರ ಪೂಜೆ ಗಳನ್ನೂ ಉತ್ಸವ,ಜಾತ್ರೆಗಳನ್ನು ನಿಲ್ಲಿಸಲಾಗಿದೆ , ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಶುಚಿತ್ವವನ್ನು ಕಾಪಾಡುವುದು ಎಲ್ಲರ ಕರ್ತವ್ಯವಾಗಿರುವುದರಿಂದ ಮುಂದಿನ ನಿರ್ದೇಶನ ಪರ್ಯಂತ ಇವುಗಳು ಜಾರಿಯಲ್ಲಿರುವುದರಿಂದ ಭಜಕ ಮಹಾಜನರು ಸಹಕರಿಸುವಂತೆ ವಿನಂತಿ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದ್ದಾರೆ .

ಕೋವಿಡ್‌ ಸೋಂಕು ಹರಡುವುದನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಸಾರ್ವಜನಿಕರ ದೃಷ್ಟಿಯಿಂದ ಸರ್ಕಾರದ ಸೂಚನೆಯನ್ನು ಎಲ್ಲರೂ ಪಾಲಿಸೋಣ. ಭಾನುವಾರ ಮನೆಯಲ್ಲಿದ್ದುಕೊಂಡು ಸೋಂಕು ವ್ಯಾಪಿಸದಂತೆ ತಡೆಯೋಣ ಎಂದು ಸ್ವಾಮೀಜಿ ಕರೆ ನೀಡಿದರು.‌

ಕೃಷ್ಣಮಠದಲ್ಲಿ ಎಂದಿನಂತೆ ಪೂಜೆಗಳು ನಡೆಯುತ್ತವೆ. ಆದರೆ, ಭಕ್ತರು ಮನೆಯಲ್ಲಿದ್ದುಕೊಂಡೇ ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಕೃಷ್ಣನ ಜಪ ಮಾಡುವ ಮೂಲಕ ರೋಗವನ್ನು ದೂರವಿಡಬೇಕು ಎಂದು ಶ್ರೀಗಳು ಸಲಹೆ ನೀಡಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago