ಉಡುಪಿ: ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್ : ಅಭಿಮಾನಿಗಳಿಂದ  ಇಂದು ಸಂಜೆ ತುರ್ತು ಸಭೆ – Vishwanews24

Featured, ಉಡುಪಿ

ಉಡುಪಿ: ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್ – ಅಭಿಮಾನಿಗಳಿಂದ  ಇಂದು ಸಂಜೆ ತುರ್ತು ಸಭೆ

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂದು ಪ್ರಬಲ ಆಕಾಂಕ್ಷಿಯಾಗಿದ್ದ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ತಪ್ಪಿದ್ದು ಅವರ ಅಭಿಮಾನಿಗಳಿಂದ ಉಡುಪಿಯ ಹೊಟೇಲ್ ಮಥುರಾದಲ್ಲಿ ಇಂದು ಸಂಜೆ ತುರ್ತು ಸಭೆ ಆಯೋಜನೆ.

ಉಡುಪಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದು ತನ್ನದೇ ತಂಡವನ್ನು ರಚಿಸಿಕೊಂಡಿದ್ದರು. ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಈ ಬಾರಿ ಟಿಕೆಟ್ ಸಿಗುತ್ತದೆ ಎಂದು ಅವರ ಅಭಿಮಾನಿಗಳು ನಂಬಿದ್ದರು.

ಕಾರ್ಕಳ : ಬೈಕ್‌ನಿಂದ ಬಿದ್ದು ಅಂಗನವಾಡಿ ಕಾರ್ಯಕರ್ತೆ ದುರ್ಮರಣ – Vishwanews24

ಆದರೇ ಇಂದು ಕೆಪಿಸಿಸಿ ಘೋಷಿಸಿದ ಪಟ್ಟಿಯಲ್ಲಿ ಮಹಿಳಾ ಕಾಂಗ್ರೆಸ್ ಸಾರಥ್ಯ ವಹಿಸಿದ್ದ, ಎರಡು ಬಾರಿ ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಭವ ಗೊಂಡಿದ್ದ ಸರಳಾ ಕಾಂಚನ್ ಅವರ ಪುತ್ರ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಉಡುಪಿ ಕ್ಷೇತ್ರದ ಟಿಕೆಟ್ ದಕ್ಕಿಸಿಕೊಂಡಿದ್ದಾರೆ.

ಈ ನಡುವೆ ಕೃಷ್ಣಮೂರ್ತಿ ಅವರ ಅಭಿಮಾನಿಗಳು ಇಂದು ಕೃಷ್ಣ ಮಠದ ಪಾರ್ಕಿಂಗ್ ಬಳಿಯ ಮಥುರಾ ಕಂಫರ್ಟ್ ಸಭಾಂಗಣದಲ್ಲಿ ಸಭೆ ಕರೆದಿದ್ದಾರೆ.

congress, ಅಂತೂ ಇಂತೂ ಫೈನಲ್ ಆಯ್ತು ಕಾಂಗ್ರೆಸ್ ಎರಡನೇ ಪಟ್ಟಿ: 43 ಅಭ್ಯರ್ಥಿಗಳ ಹೆಸರು  ಗುರುವಾರ ಬಿಡುಗಡೆ ಸಾಧ್ಯತೆ - congress finalises its second list for karnataka  assembly elections with 43 ...

ಈ ಸಭೆಯಲ್ಲಿ ಕೃಷ್ಣಮೂರ್ತಿ ಅವರ ಮುಂದಿನ ನಡೆಯ ಬಗ್ಗೆ ಅಭಿಮಾನಿಗಳು ನಿರ್ಧಾರಿಸಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply