ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಬೇಕೆಂದು ಪ್ರಬಲ ಆಕಾಂಕ್ಷಿಯಾಗಿದ್ದ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ತಪ್ಪಿದ್ದು ಅವರ ಅಭಿಮಾನಿಗಳಿಂದ ಉಡುಪಿಯ ಹೊಟೇಲ್ ಮಥುರಾದಲ್ಲಿ ಇಂದು ಸಂಜೆ ತುರ್ತು ಸಭೆ ಆಯೋಜನೆ.
ಉಡುಪಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ದುಡಿದು ತನ್ನದೇ ತಂಡವನ್ನು ರಚಿಸಿಕೊಂಡಿದ್ದರು. ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದ ಕಿನ್ನಿಮೂಲ್ಕಿ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಈ ಬಾರಿ ಟಿಕೆಟ್ ಸಿಗುತ್ತದೆ ಎಂದು ಅವರ ಅಭಿಮಾನಿಗಳು ನಂಬಿದ್ದರು.
ಆದರೇ ಇಂದು ಕೆಪಿಸಿಸಿ ಘೋಷಿಸಿದ ಪಟ್ಟಿಯಲ್ಲಿ ಮಹಿಳಾ ಕಾಂಗ್ರೆಸ್ ಸಾರಥ್ಯ ವಹಿಸಿದ್ದ, ಎರಡು ಬಾರಿ ಬ್ರಹ್ಮಾವರ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಭವ ಗೊಂಡಿದ್ದ ಸರಳಾ ಕಾಂಚನ್ ಅವರ ಪುತ್ರ ಪ್ರಸಾದ್ ರಾಜ್ ಕಾಂಚನ್ ಅವರಿಗೆ ಉಡುಪಿ ಕ್ಷೇತ್ರದ ಟಿಕೆಟ್ ದಕ್ಕಿಸಿಕೊಂಡಿದ್ದಾರೆ.
ಈ ನಡುವೆ ಕೃಷ್ಣಮೂರ್ತಿ ಅವರ ಅಭಿಮಾನಿಗಳು ಇಂದು ಕೃಷ್ಣ ಮಠದ ಪಾರ್ಕಿಂಗ್ ಬಳಿಯ ಮಥುರಾ ಕಂಫರ್ಟ್ ಸಭಾಂಗಣದಲ್ಲಿ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಕೃಷ್ಣಮೂರ್ತಿ ಅವರ ಮುಂದಿನ ನಡೆಯ ಬಗ್ಗೆ ಅಭಿಮಾನಿಗಳು ನಿರ್ಧಾರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…