Featured

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ

ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ ಮುದ್ರಾಧಾರಣೆ ಭಕ್ತಿ ಶ್ರದ್ಧೆಯಿಂದ ನೆರವೇರಿತು.

ಶ್ರೀ ಕಾಣಿಯೂರು ಮಠ ಹಾಗೂ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ತಪ್ತ ಮುದ್ರಾಧಾರಣೆ ಸ್ವೀಕರಿಸಿದರು.

ಉಡುಪಿ ನಗರದ ಶ್ರೀ ಕಾಣಿಯೂರು ಮಠದಲ್ಲಿ ಪ್ರಥಮ ಏಕಾದಶಿ ಪ್ರಯುಕ್ತ ತಪ್ತ ಮುದ್ರಾಧಾರಣೆಯು ವೈದಿಕ ಸಂಪ್ರದಾಯದಂತೆ ನೆರವೇರಿತು.

ಕಾರ್ಯಕ್ರಮದ ಅಂಗವಾಗಿ ಸುದರ್ಶನ ಹೋಮ, ವಿಶೇಷ ಪೂಜೆ, ಆರತಿ ಹಾಗೂ ಪೂರ್ಣಾಹುತಿ ವಿಧಿವಿಧಾನಗಳನ್ನು ನಡೆಸಲಾಯಿತು. ಬಳಿಕ ಕಾಣಿಯೂರು ಮಠದ ಪೀಠಾಧಿಪತಿ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ನೆರೆದಿದ್ದ ಅಪಾರ ಸಂಖ್ಯೆಯ ಭಕ್ತರಿಗೆ ತಪ್ತ ಮುದ್ರಾಧಾರಣೆ ಮಾಡಿದರು.

ಇದೇ ವೇಳೆ ಉಡುಪಿ ಶ್ರೀಕೃಷ್ಣ ಮಠದಲ್ಲಿಯೂ ಪ್ರಥಮ ಏಕಾದಶಿ ಅಂಗವಾಗಿ ತಪ್ತ ಮುದ್ರಾಧಾರಣೆ ಶ್ರದ್ಧಾಭಕ್ತಿಯಿಂದ ನಡೆಯಿತು. ಪರ್ಯಾಯ ಪುತ್ತಿಗೆ ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಭಕ್ತರಿಗೆ ತಪ್ತ ಮುದ್ರಾಧಾರಣೆ ಮಾಡಿದರು.

ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ತಪ್ತ ಮುದ್ರಾಧಾರಣೆ ಸ್ವೀಕರಿಸಿ ಶ್ರೀಕೃಷ್ಣನ ಕೃಪೆಗೆ ಪಾತ್ರರಾದರು

Vishwa News 24

Recent Posts

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 hour ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

4 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

4 hours ago

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ – vishwanews24

ದ್ವೇಷ ಭಾಷಣ ಮಾಡಿರುವ ಸಿ.ಟಿ.ರವಿಯನ್ನು ಕೂಡಲೇ ಬಂಧಿಸಿ: ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟ ಆಗ್ರಹ ಮಂಗಳೂರು: ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನೇ ರಾಜಕೀಯ…

4 hours ago