ಉಡುಪಿ ಕೃಷ್ಣ ಮಠ ಸೋಮವಾರ ಓಪನ್ ಆಗಲ್ಲ-ಕೃಷ್ಣನ ದರ್ಶನ ಸಿಗುವುದಕ್ಕೆ ಜುಲೈ ತನಕ ಕಾಯಬೇಕಾಗಿದೆ: vishwanews24

ಉಡುಪಿ: ಸರ್ಕಾರ ಜೂನ್ 8ರ ನಂತರ ದೇವಸ್ಥಾನ ತೆರೆಯುವ ಅವಕಾಶ ಕೊಟ್ಟಿದೆ. ಆದರೆ ಉಡುಪಿ ಕೃಷ್ಣನ ದರ್ಶನ ಸಿಗುವುದಕ್ಕೆ ಜುಲೈ ತನಕ ಕಾಯಬೇಕಾಗಿದೆ. ಯಾಕಂದರೆ ಉಡುಪಿ ಕೃಷ್ಣ ಮಠ ಸೋಮವಾರ ಓಪನ್ ಆಗಲ್ಲ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅದಮಾರು ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ, ನಾವು ಇನ್ನೂ 20 ರಿಂದ 30 ದಿನ ಕಾಯುತ್ತೇವೆ. ಮುಂದಿನ ಬೆಳವಣಿಗೆಗಳನ್ನು ನೋಡಿ ದರ್ಶನ ವ್ಯವಸ್ಥೆ ಮಾಡುತ್ತೇವೆ. ಈಗಲೇ ದರ್ಶನ ಆರಂಭಿಸಿದರೆ ಎಲ್ಲೆಡೆಯಿಂದ ಭಕ್ತರು ಬರುತ್ತಾರೆ. ಹೀಗಾಗಿ ನಮಗೆ ಭಕ್ತರ ಮತ್ತು ಕೃಷ್ಣ ಮಠದ ಸಿಬ್ಬಂದಿ ಆರೋಗ್ಯ ಮುಖ್ಯ ಎಂದರು.

ಕೃಷ್ಣಮಠದಲ್ಲಿ ಬಹಳ ಹಿಂದಿನಿಂದ ನಡೆದುಕೊಂಡ ಪರಂಪರೆ ಇದೆ. ಯತಿಗಳೇ ಪೂಜೆ ಮಾಡಿಕೊಂಡು ಬರುವ ಸಂಪ್ರದಾಯ ಇದೆ. ಯಾರಿಗೂ ಸಮಸ್ಯೆ ಆಗಬಾರದು. ಹೀಗಾಗಿ ಸೋಮವಾರ ನಾವು ದೇವಸ್ಥಾನವನ್ನು ತೆರೆಯುವುದಿಲ್ಲ ಎಂದು ಸ್ವಾಮೀಜಿ ಹೇಳಿದರು.

ಶ್ರೀಕೃಷ್ಣ ಮಠಕ್ಕೆ ಪ್ರತಿದಿನ ಒಂದು ಲಕ್ಷ ರೂಪಾಯಿಯಷ್ಟು ಖರ್ಚು ಇದೆ. ಲಾಕ್‍ಡೌನ್ ಸಂದರ್ಭದಲ್ಲಿ ಕೂಡ ನಮ್ಮೆಲ್ಲಾ ಸಿಬ್ಬಂದಿಗೆ ಸಂಬಳ ಕೊಡುತ್ತಿದ್ದೇವೆ. ಅದೇನೆ ಇದ್ದರೂ ಮಠ ತೆರೆಯುವ ಬಗ್ಗೆ ಮುಂದೆ ತೀರ್ಮಾನ ಮಾಡುತ್ತೇವೆ. ಕೋವಿಡ್-19 ಸೋಂಕು ಶೀಘ್ರ ದೂರವಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ. ಕಳೆದ ಎರಡು ತಿಂಗಳು ಸರ್ಕಾರ ಮತ್ತು ಅಧಿಕಾರಿಗಳ ಕಾರ್ಯ ಶ್ಲಾಘನೀಯ ಎಂದು ಈಶಪ್ರೀಯ ತೀರ್ಥ ಸ್ವಾಮೀಜಿ ಹೇಳಿದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

11 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

13 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

14 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

14 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

14 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

14 hours ago