ಉಡುಪಿ: ಸರ್ಕಾರ ಜೂನ್ 8ರ ನಂತರ ದೇವಸ್ಥಾನ ತೆರೆಯುವ ಅವಕಾಶ ಕೊಟ್ಟಿದೆ. ಆದರೆ ಉಡುಪಿ ಕೃಷ್ಣನ ದರ್ಶನ ಸಿಗುವುದಕ್ಕೆ ಜುಲೈ ತನಕ ಕಾಯಬೇಕಾಗಿದೆ. ಯಾಕಂದರೆ ಉಡುಪಿ ಕೃಷ್ಣ ಮಠ ಸೋಮವಾರ ಓಪನ್ ಆಗಲ್ಲ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅದಮಾರು ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ, ನಾವು ಇನ್ನೂ 20 ರಿಂದ 30 ದಿನ ಕಾಯುತ್ತೇವೆ. ಮುಂದಿನ ಬೆಳವಣಿಗೆಗಳನ್ನು ನೋಡಿ ದರ್ಶನ ವ್ಯವಸ್ಥೆ ಮಾಡುತ್ತೇವೆ. ಈಗಲೇ ದರ್ಶನ ಆರಂಭಿಸಿದರೆ ಎಲ್ಲೆಡೆಯಿಂದ ಭಕ್ತರು ಬರುತ್ತಾರೆ. ಹೀಗಾಗಿ ನಮಗೆ ಭಕ್ತರ ಮತ್ತು ಕೃಷ್ಣ ಮಠದ ಸಿಬ್ಬಂದಿ ಆರೋಗ್ಯ ಮುಖ್ಯ ಎಂದರು.
ಕೃಷ್ಣಮಠದಲ್ಲಿ ಬಹಳ ಹಿಂದಿನಿಂದ ನಡೆದುಕೊಂಡ ಪರಂಪರೆ ಇದೆ. ಯತಿಗಳೇ ಪೂಜೆ ಮಾಡಿಕೊಂಡು ಬರುವ ಸಂಪ್ರದಾಯ ಇದೆ. ಯಾರಿಗೂ ಸಮಸ್ಯೆ ಆಗಬಾರದು. ಹೀಗಾಗಿ ಸೋಮವಾರ ನಾವು ದೇವಸ್ಥಾನವನ್ನು ತೆರೆಯುವುದಿಲ್ಲ ಎಂದು ಸ್ವಾಮೀಜಿ ಹೇಳಿದರು.
ಶ್ರೀಕೃಷ್ಣ ಮಠಕ್ಕೆ ಪ್ರತಿದಿನ ಒಂದು ಲಕ್ಷ ರೂಪಾಯಿಯಷ್ಟು ಖರ್ಚು ಇದೆ. ಲಾಕ್ಡೌನ್ ಸಂದರ್ಭದಲ್ಲಿ ಕೂಡ ನಮ್ಮೆಲ್ಲಾ ಸಿಬ್ಬಂದಿಗೆ ಸಂಬಳ ಕೊಡುತ್ತಿದ್ದೇವೆ. ಅದೇನೆ ಇದ್ದರೂ ಮಠ ತೆರೆಯುವ ಬಗ್ಗೆ ಮುಂದೆ ತೀರ್ಮಾನ ಮಾಡುತ್ತೇವೆ. ಕೋವಿಡ್-19 ಸೋಂಕು ಶೀಘ್ರ ದೂರವಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ. ಕಳೆದ ಎರಡು ತಿಂಗಳು ಸರ್ಕಾರ ಮತ್ತು ಅಧಿಕಾರಿಗಳ ಕಾರ್ಯ ಶ್ಲಾಘನೀಯ ಎಂದು ಈಶಪ್ರೀಯ ತೀರ್ಥ ಸ್ವಾಮೀಜಿ ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…