Featured

ಉಡುಪಿ: ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ – vishwanews24

ಉಡುಪಿ: ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ಜಿಲ್ಲಾಡಳಿತದ ನೀತಿಯಿಂದ ಬಡವರಿಗೆ ಮನೆ ಕಟ್ಟುವ ಕನಸು ನುಚ್ಚು ನೂರಾಗಿದೆ: ಬಾಲಕೃಷ್ಣ ಶೆಟ್ಟಿ

ಉಡುಪಿ: ಜಿಲ್ಲೆಯಲ್ಲಿ ಬಡವರು ಮನೆಯನ್ನು ಪಿಲ್ಲರ್ ನಿಂದ ಕಟ್ಟಲು ಸಾಧ್ಯವಿಲ್ಲದಿರುವುದರಿಂದ ಕೆಂಪು ಕಲ್ಲುಗಳನ್ನು ಅವಲಂಬಿಸಿದ್ದಾರೆ. ಜಿಲ್ಲಾಡಳಿತದ ನೀತಿಯಿಂದ ಬಡವರಿಗೆ ಮನೆ ಕಟ್ಟುವ ಕನಸು ನುಚ್ಚು ನೂರಾಗಿದೆ. ಮನೆ ಕಟ್ಟುವ ಕಟ್ಟಡ ಕಾರ್ಮಿಕರಿಗೆ ಕೆಲಸವಿಲ್ಲದೇ ನಿರುದ್ಯೋಗಿದ್ದಾರೆ. ಮುಂದೆ ಮರಳು ಸಮಸ್ಯೆಯೂ ಬಿಗಡಾಯಿಸಲಿದೆ. ಇದರ ವಿರುದ್ಧ ತೀವ್ರ ಹೋರಾಟ ನಡೆಸಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.

ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಆರಂಭಗೊಂಡ ಅನಿರ್ಧಿಷ್ಟಾವಧಿ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಜಿಲ್ಲೆಯಲ್ಲಿ ಕೆಂಪು ಕಲ್ಲಿಗಾಗಿ ಜಿಲ್ಲಾಡಳಿತ ಗುರುತಿಸಿದ 147 ಸ್ಥಳಗಳಲ್ಲಿ ಗುಣಮಟ್ಟದ ಕೆಂಪು ಕಲ್ಲುಗಳು ಲಭ್ಯವಿಲ್ಲದ ಕಾರಣ ಪೂರೈಕೆ ಕಡಿಮೆಯಾಗಿ ಅವಶ್ಯಕತೆ ಜಾಸ್ತಿ ಇದೆ. ಕೆಂಪು ಕಲ್ಲಿಗೆ ದುಬಾರಿ ದರವನ್ನು ಬಡವರಿಂದ ವಸೂಲಿ ಮಾಡಲು ಜಿಲ್ಲಾಡಳಿತ ಅವಕಾಶ ಮಾಡಿದೆ. ಜಿಲ್ಲಾಡಳಿತ ಗುಣಮಟ್ಟದ ಕಲ್ಲು ಸಿಗುವ ಸ್ಥಳದಲ್ಲಿ ಕಾನೂನು ಬದ್ಧ ಪರವಾನಿಗೆ ನೀಡಿ ಕೊರತೆ ನೀಗಿಸಬೇಕು, ರಾಜಧನ ಕೇರಳ ಮಾದರಿಯಂತೆ ಕಡಿಮೆ ಮಾಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಯವರು ಜಂಟಿ ಸಭೆ ನಡೆಸಿ ಇತ್ಯರ್ಥಪಡಿಸಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಒತ್ತಾಯಿಸಿದ್ದಾರೆ.

ಧರಣಿಯಲ್ಲಿ ಸಿಐಟಿಯು ಮುಖಂಡರಾದ ಎಚ್.ನರಸಿಂಹ ಚಂದ್ರಶೇಖರ ವಿ., ರಾಮ ಕಾರ್ಕಡ, ಶಶಿಧರ ಗೊಲ್ಲ, ಕವಿರಾಜ್ ಎಸ್. ಕಾಂಚನ್, ಸುಭಾಶ್ಚಂದ್ರ ನಾಯಕ್, ಚಿಕ್ಕ ಮೊಗವೀರ ಗಂಗೊಳ್ಳಿ, ರಾಜೀವ ಪಡುಕೋಣೆ, ಶ್ರೀಧರ ಉಪ್ಪುಂದ, ರಮೇಶ್ ಗುಲ್ವಾಡಿ, ನಾಗರತ್ನಾ ಪಡುವರಿ, ಜ್ಯೋತಿ, ಶಾಂತಾ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಂಚಾಲಕ ಸಂಜೀವ ಬಳ್ಕೂರು ಉಪಸ್ಥಿತರಿದ್ದರು.

ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಬೇಡಿಕೆಗಳು

1.ಜಿಲ್ಲೆಯಲ್ಲಿರುವ ಕೆಂಪು ಕಲ್ಲು ಅಥವ ಮುರುಕಲ್ಲು ಎಂದು ಕರೆಯಲ್ಪಡುವ ಲ್ಯಾಟರೈಟ್ ಕೋರೆಗಳಿಗೆ ಅಪಾಯವಿಲ್ಲದ ಸ್ಥಳಗಳಲ್ಲಿ ಪರವಾನಿಗೆ ನೀಡಬೇಕು

2, ಕೇರಳ ಮಾದರಿಯಲ್ಲಿ ರಾಜಧನ ಅಥವ ರಾಯಲ್ಟಿ ಪ್ರತೀ ಟನ್ ಗೆ 76 ರೂ. ಮಾತ್ರ ಪಾವತಿಸಲು ಅವಕಾಶ ನೀಡಬೇಕು. ಈಗ ಇರುವ ಬೇರೆ ಬೇರೆ ತೆರಿಗೆಗಳನ್ನು ಕೈ ಬಿಡಬೇಕು

3. ಆರು ತಿಂಗಳಿಗೊಮ್ಮೆ ಪರವಾನಿಗೆ ನವೀಕರಿಸುವುದನ್ನು ಕೈ ಬಿಟ್ಟು ವರ್ಷಕೊಮ್ಮೆ ನವೀಕರಿಸಲು ಅವಕಾಶ ನೀಡಬೇಕು. ಇದರಿಂದ ಅನಧಿಕೃತ ವ್ಯವಹಾರ ತಡೆಯಲು ಸಾಧ್ಯವಾಗುತ್ತದೆ.

4.ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ದೊರಕುವ ಕೋರೆಗಳು ಕಡಿಮೆ ಇರುವುದರಿಂದ ದಕ್ಷಿಣ ಕನ್ನಡ ಕೋರೆಗಳಿಂದ ಬರುವ ಕೆಂಪು ಕಲ್ಲುಗಳಿಗೆ ನಿರ್ಬಂಧ ಹೇರಬಾರದು.

5. ಕೆಂಪು ಕಲ್ಲು ದುಬಾರಿ ದರದಲ್ಲಿ ವಿತರಣೆ ಮಾಡುವವರ ಮೇಲೆ ಕ್ರಮ ಜರುಗಿಸಬೇಕು ಈ ಹಿಂದಿನ ದರದಂತೆ ಕಲ್ಲು ಜನರಿಗೆ ಸಿಗುವಂತಾಗಬೇಕು.

6.ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಮಾನ್ಯ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗಣಿ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಜಂಟಿ ಸಭೆ ನಡೆಸಲು ಸಮಯ ನಿಗದಿಗೊಳಿಸಬೇಕು.

Vishwa News 24

Recent Posts

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

58 seconds ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

21 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

22 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

24 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

1 day ago