ಉಡುಪಿ: ಜಿಲ್ಲೆಯಲ್ಲಿ ಬಡವರು ಮನೆಯನ್ನು ಪಿಲ್ಲರ್ ನಿಂದ ಕಟ್ಟಲು ಸಾಧ್ಯವಿಲ್ಲದಿರುವುದರಿಂದ ಕೆಂಪು ಕಲ್ಲುಗಳನ್ನು ಅವಲಂಬಿಸಿದ್ದಾರೆ. ಜಿಲ್ಲಾಡಳಿತದ ನೀತಿಯಿಂದ ಬಡವರಿಗೆ ಮನೆ ಕಟ್ಟುವ ಕನಸು ನುಚ್ಚು ನೂರಾಗಿದೆ. ಮನೆ ಕಟ್ಟುವ ಕಟ್ಟಡ ಕಾರ್ಮಿಕರಿಗೆ ಕೆಲಸವಿಲ್ಲದೇ ನಿರುದ್ಯೋಗಿದ್ದಾರೆ. ಮುಂದೆ ಮರಳು ಸಮಸ್ಯೆಯೂ ಬಿಗಡಾಯಿಸಲಿದೆ. ಇದರ ವಿರುದ್ಧ ತೀವ್ರ ಹೋರಾಟ ನಡೆಸಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.
ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಆರಂಭಗೊಂಡ ಅನಿರ್ಧಿಷ್ಟಾವಧಿ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಜಿಲ್ಲೆಯಲ್ಲಿ ಕೆಂಪು ಕಲ್ಲಿಗಾಗಿ ಜಿಲ್ಲಾಡಳಿತ ಗುರುತಿಸಿದ 147 ಸ್ಥಳಗಳಲ್ಲಿ ಗುಣಮಟ್ಟದ ಕೆಂಪು ಕಲ್ಲುಗಳು ಲಭ್ಯವಿಲ್ಲದ ಕಾರಣ ಪೂರೈಕೆ ಕಡಿಮೆಯಾಗಿ ಅವಶ್ಯಕತೆ ಜಾಸ್ತಿ ಇದೆ. ಕೆಂಪು ಕಲ್ಲಿಗೆ ದುಬಾರಿ ದರವನ್ನು ಬಡವರಿಂದ ವಸೂಲಿ ಮಾಡಲು ಜಿಲ್ಲಾಡಳಿತ ಅವಕಾಶ ಮಾಡಿದೆ. ಜಿಲ್ಲಾಡಳಿತ ಗುಣಮಟ್ಟದ ಕಲ್ಲು ಸಿಗುವ ಸ್ಥಳದಲ್ಲಿ ಕಾನೂನು ಬದ್ಧ ಪರವಾನಿಗೆ ನೀಡಿ ಕೊರತೆ ನೀಗಿಸಬೇಕು, ರಾಜಧನ ಕೇರಳ ಮಾದರಿಯಂತೆ ಕಡಿಮೆ ಮಾಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಯವರು ಜಂಟಿ ಸಭೆ ನಡೆಸಿ ಇತ್ಯರ್ಥಪಡಿಸಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಒತ್ತಾಯಿಸಿದ್ದಾರೆ.
ಧರಣಿಯಲ್ಲಿ ಸಿಐಟಿಯು ಮುಖಂಡರಾದ ಎಚ್.ನರಸಿಂಹ ಚಂದ್ರಶೇಖರ ವಿ., ರಾಮ ಕಾರ್ಕಡ, ಶಶಿಧರ ಗೊಲ್ಲ, ಕವಿರಾಜ್ ಎಸ್. ಕಾಂಚನ್, ಸುಭಾಶ್ಚಂದ್ರ ನಾಯಕ್, ಚಿಕ್ಕ ಮೊಗವೀರ ಗಂಗೊಳ್ಳಿ, ರಾಜೀವ ಪಡುಕೋಣೆ, ಶ್ರೀಧರ ಉಪ್ಪುಂದ, ರಮೇಶ್ ಗುಲ್ವಾಡಿ, ನಾಗರತ್ನಾ ಪಡುವರಿ, ಜ್ಯೋತಿ, ಶಾಂತಾ ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಂಚಾಲಕ ಸಂಜೀವ ಬಳ್ಕೂರು ಉಪಸ್ಥಿತರಿದ್ದರು.
ರೊನಾಲ್ಡ್ ರಾಜೇಶ್ ಕ್ವಾಡ್ರಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಬೇಡಿಕೆಗಳು
1.ಜಿಲ್ಲೆಯಲ್ಲಿರುವ ಕೆಂಪು ಕಲ್ಲು ಅಥವ ಮುರುಕಲ್ಲು ಎಂದು ಕರೆಯಲ್ಪಡುವ ಲ್ಯಾಟರೈಟ್ ಕೋರೆಗಳಿಗೆ ಅಪಾಯವಿಲ್ಲದ ಸ್ಥಳಗಳಲ್ಲಿ ಪರವಾನಿಗೆ ನೀಡಬೇಕು
2, ಕೇರಳ ಮಾದರಿಯಲ್ಲಿ ರಾಜಧನ ಅಥವ ರಾಯಲ್ಟಿ ಪ್ರತೀ ಟನ್ ಗೆ 76 ರೂ. ಮಾತ್ರ ಪಾವತಿಸಲು ಅವಕಾಶ ನೀಡಬೇಕು. ಈಗ ಇರುವ ಬೇರೆ ಬೇರೆ ತೆರಿಗೆಗಳನ್ನು ಕೈ ಬಿಡಬೇಕು
3. ಆರು ತಿಂಗಳಿಗೊಮ್ಮೆ ಪರವಾನಿಗೆ ನವೀಕರಿಸುವುದನ್ನು ಕೈ ಬಿಟ್ಟು ವರ್ಷಕೊಮ್ಮೆ ನವೀಕರಿಸಲು ಅವಕಾಶ ನೀಡಬೇಕು. ಇದರಿಂದ ಅನಧಿಕೃತ ವ್ಯವಹಾರ ತಡೆಯಲು ಸಾಧ್ಯವಾಗುತ್ತದೆ.
4.ಉಡುಪಿ ಜಿಲ್ಲೆಯಲ್ಲಿ ಕೆಂಪು ಕಲ್ಲು ದೊರಕುವ ಕೋರೆಗಳು ಕಡಿಮೆ ಇರುವುದರಿಂದ ದಕ್ಷಿಣ ಕನ್ನಡ ಕೋರೆಗಳಿಂದ ಬರುವ ಕೆಂಪು ಕಲ್ಲುಗಳಿಗೆ ನಿರ್ಬಂಧ ಹೇರಬಾರದು.
5. ಕೆಂಪು ಕಲ್ಲು ದುಬಾರಿ ದರದಲ್ಲಿ ವಿತರಣೆ ಮಾಡುವವರ ಮೇಲೆ ಕ್ರಮ ಜರುಗಿಸಬೇಕು ಈ ಹಿಂದಿನ ದರದಂತೆ ಕಲ್ಲು ಜನರಿಗೆ ಸಿಗುವಂತಾಗಬೇಕು.
6.ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಮಾನ್ಯ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಗಣಿ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಜಂಟಿ ಸಭೆ ನಡೆಸಲು ಸಮಯ ನಿಗದಿಗೊಳಿಸಬೇಕು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…