Featured

ಉಡುಪಿ : ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್’ಗಳಲ್ಲಿ ಕೊರೋನಾ ಜಾಗೃತಿ  ಸಂದೇಶ : ಡಿಸಿ ಶ್ಲಾಘನೆ – Vishwanews24

ಉಡುಪಿ : ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್’ಗಳಲ್ಲಿ ಕೊರೋನಾ ಜಾಗೃತಿ  ಸಂದೇಶ ..

2 ಡೋಸ್‌ ಕೋವಿಡ್‌ -19 ಲಸಿಕೆ ಕಡ್ಡಾಯ , ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳುವುದು ಎಂಬ ಬರಹ ..

ಸಾರಿಗೆ ಇಲಾಖೆಯ ಕಾರ್ಯ ಶ್ಲಾಘನೀಯ :  ಉಡುಪಿ ಜಿಲ್ಲಾಧಿಕಾರಿ..

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19‌ ಲಸಿಕೆಯ 1 ನೇ ಹಾಗೂ 2 ನೇ ಡೋಸ್‌ ವಿತರಣೆಯಲ್ಲಿ ಶೇ.100 ಪ್ರತಿಶತ ಪ್ರಗತಿ ಸಾಧಿಸಲು ಜಿಲ್ಲಾಡಳಿವು ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹೀಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್.ಆರ್.ಟಿ.ಸಿ) ಕೈ ಜೋಡಿಸಿ ಜನರಲ್ಲಿ ಕೊರೋನಾ‌ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಜವಬ್ದಾರಿಯುತ ಕಾರ್ಯ ಮಾಡುತ್ತಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಬಸ್ಸುಗಳ ಟಿಕೇಟ್‌ ಗಳಲ್ಲಿ “2 ಡೋಸ್‌ ಕೋವಿಡ್‌ -19 ಲಸಿಕೆ ಕಡ್ಡಾಯ , ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳುವುದು“ ಎಂಬ ಬರಹಗಳನ್ನು ಮುದ್ರಿಸುವ ಮುಖಾಂತರ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಲ್ಲಿ ಹಾಗೂ ಜಿಲ್ಲೆಯ ಜನರಲ್ಲಿ ಕೋವಿಡ್‌ -19 ರ ಬಗ್ಗೆ ಜಾಗರೂಕತೆಯನ್ನು ಮೂಡಿಸುವ ನಿಟ್ಟಿನಲ್ಲಿ ನವೀನ ಶೈಲಿಯ ಯೋಜನೆಯನ್ನು ಹಮ್ಮಿಕೊಂಡಿರುವ ಸಾರಿಗೆ ಇಲಾಖೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಭಿಪ್ರಾಯಪಟ್ಟಿದ್ದಾರೆ‌.

“ಇತರ ಇಲಾಖೆಗಳು/ನಿಗಮಗಳು ಸಾರ್ವಜನಿಕರಲ್ಲಿ ಕೋವಿಡ್-19‌ ರ ಬಗ್ಗೆ ಜಾಗೃತಿಯನ್ನು ಮೂಡಿಸುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಹಾಗೂ ಮಾಲ್ ಗಳಲ್ಲಿ, ಸಿನಿಮಾ ಮಂದಿರಗಳಲ್ಲಿ ಮತ್ತು ಎಲ್ಲಾ ಅಂಗಡಿಗಳಲ್ಲಿ ಗ್ರಾಹಕರಿಗೆ ನೀಡುವ ಬಿಲ್ಲು / ಸ್ವೀಕೃತಿಗಳಲ್ಲಿ ಇದೇ ಮಾದರಿಯಲ್ಲಿ ಕೋವಿಡ್-19‌ ರ ಬಗ್ಗೆ ಜಾಗೃತಿಯನ್ನು ಮೂಡಿಸುವ ಬರಹಗಳನ್ನು ನಮೂದಿಸುವಂತೆ ಕೋರುತ್ತೇನೆ” ಎಂದು ಅವರು ಸಾಮಾಜಿಕ ‌ಜಾಲತಾಣದ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ‌

Vishwa News 24

Recent Posts

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

8 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

8 hours ago

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ – vishwanews24

ಕರ್ನಾಟಕದಲ್ಲಿ ಹೆಚ್ಚುತ್ತಿರುವ  H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…

9 hours ago

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ – vishwanews24

ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…

9 hours ago

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

12 hours ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

12 hours ago