Featured

ಉಡುಪಿ : ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್’ಗಳಲ್ಲಿ ಕೊರೋನಾ ಜಾಗೃತಿ  ಸಂದೇಶ : ಡಿಸಿ ಶ್ಲಾಘನೆ – Vishwanews24

ಉಡುಪಿ : ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್’ಗಳಲ್ಲಿ ಕೊರೋನಾ ಜಾಗೃತಿ  ಸಂದೇಶ ..

2 ಡೋಸ್‌ ಕೋವಿಡ್‌ -19 ಲಸಿಕೆ ಕಡ್ಡಾಯ , ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳುವುದು ಎಂಬ ಬರಹ ..

ಸಾರಿಗೆ ಇಲಾಖೆಯ ಕಾರ್ಯ ಶ್ಲಾಘನೀಯ :  ಉಡುಪಿ ಜಿಲ್ಲಾಧಿಕಾರಿ..

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19‌ ಲಸಿಕೆಯ 1 ನೇ ಹಾಗೂ 2 ನೇ ಡೋಸ್‌ ವಿತರಣೆಯಲ್ಲಿ ಶೇ.100 ಪ್ರತಿಶತ ಪ್ರಗತಿ ಸಾಧಿಸಲು ಜಿಲ್ಲಾಡಳಿವು ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹೀಗೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅವಿರತವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್.ಆರ್.ಟಿ.ಸಿ) ಕೈ ಜೋಡಿಸಿ ಜನರಲ್ಲಿ ಕೊರೋನಾ‌ ನಿಯಮ ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಜವಬ್ದಾರಿಯುತ ಕಾರ್ಯ ಮಾಡುತ್ತಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಬಸ್ಸುಗಳ ಟಿಕೇಟ್‌ ಗಳಲ್ಲಿ “2 ಡೋಸ್‌ ಕೋವಿಡ್‌ -19 ಲಸಿಕೆ ಕಡ್ಡಾಯ , ಕಡ್ಡಾಯವಾಗಿ ಮಾಸ್ಕ್‌ ಹಾಕಿಕೊಳ್ಳುವುದು“ ಎಂಬ ಬರಹಗಳನ್ನು ಮುದ್ರಿಸುವ ಮುಖಾಂತರ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಲ್ಲಿ ಹಾಗೂ ಜಿಲ್ಲೆಯ ಜನರಲ್ಲಿ ಕೋವಿಡ್‌ -19 ರ ಬಗ್ಗೆ ಜಾಗರೂಕತೆಯನ್ನು ಮೂಡಿಸುವ ನಿಟ್ಟಿನಲ್ಲಿ ನವೀನ ಶೈಲಿಯ ಯೋಜನೆಯನ್ನು ಹಮ್ಮಿಕೊಂಡಿರುವ ಸಾರಿಗೆ ಇಲಾಖೆಯ ಕಾರ್ಯ ಶ್ಲಾಘನೀಯವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಭಿಪ್ರಾಯಪಟ್ಟಿದ್ದಾರೆ‌.

“ಇತರ ಇಲಾಖೆಗಳು/ನಿಗಮಗಳು ಸಾರ್ವಜನಿಕರಲ್ಲಿ ಕೋವಿಡ್-19‌ ರ ಬಗ್ಗೆ ಜಾಗೃತಿಯನ್ನು ಮೂಡಿಸುವಲ್ಲಿ ಕಾರ್ಯಪ್ರವೃತ್ತರಾಗುವಂತೆ ಹಾಗೂ ಮಾಲ್ ಗಳಲ್ಲಿ, ಸಿನಿಮಾ ಮಂದಿರಗಳಲ್ಲಿ ಮತ್ತು ಎಲ್ಲಾ ಅಂಗಡಿಗಳಲ್ಲಿ ಗ್ರಾಹಕರಿಗೆ ನೀಡುವ ಬಿಲ್ಲು / ಸ್ವೀಕೃತಿಗಳಲ್ಲಿ ಇದೇ ಮಾದರಿಯಲ್ಲಿ ಕೋವಿಡ್-19‌ ರ ಬಗ್ಗೆ ಜಾಗೃತಿಯನ್ನು ಮೂಡಿಸುವ ಬರಹಗಳನ್ನು ನಮೂದಿಸುವಂತೆ ಕೋರುತ್ತೇನೆ” ಎಂದು ಅವರು ಸಾಮಾಜಿಕ ‌ಜಾಲತಾಣದ ಮೂಲಕ ಜನರಲ್ಲಿ ಮನವಿ ಮಾಡಿದ್ದಾರೆ‌

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

10 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

13 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

13 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

13 hours ago