ಉಡುಪಿ:  ಕೆಪಿಸಿಸಿ ಮಾಧ್ಯಮ- ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ – Vishwanews24

Featured, ಉಡುಪಿ

ಉಡುಪಿ:  ಕೆಪಿಸಿಸಿ ಮಾಧ್ಯಮ- ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ

ಉಡುಪಿ: ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಉಡುಪಿ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷಮಂಗಳೂರು ವಿ ವಿ ಶೈಕ್ಷಣಿಕ ಸಮಿತಿ ಸದಸ್ಯ ಅಖಿಲ‌ ಭಾರತ ಕಾಂಗ್ರೆಸ್ ಸಮಿತಿ ಸದಸ್ಯ ಇತ್ಯಾದಿ ಹುದ್ದೆಗಳನ್ನು ಈ ಹಿಂದೆ ಅಲಂಕರಿಸಿದ ಶೆಣೈ ಯವರು ಅದಲ್ಲದೇ ಸಹಬಾಳ್ವೆ, ಉಡುಪಿ, ಸೌತ್ ಶಾಲಾ ಹಳೆ ವಿದ್ಯಾರ್ಥಿ ಸಂಘ, ಹೀಗೆ ಅನೇಕ ಸಾಮಾಜಿಕ ಸಂಸ್ಥೆಗಳಲ್ಲಿ ಮುಂದಾಳತ್ವ ಹೊತ್ತು ಕೆಲಸ ಮಾಡಿದವರು.

ಕರ್ನಾಟಕ ‌ಪ್ರದೇಶ ಕಾಂಗ್ರೆಸ್ ಸಮಿತಿಯ ವಾರ್ ರೂಮ್ ನ ಸದಸ್ಯ ಆಗಿ ಉಡುಪಿ ಜಿಲ್ಲಾ ಕೋ ಆರ್ಡಿನಟರ್, ಸಂಚಾಲಕ ಆಗಿ ಸೇವೆ ಸಲ್ಲಿಸುವ ಅವಕಾಶವನ್ನು ಅಧ್ಯಕ್ಷರಾದ ಡಿಕೆ ಶಿವಕುಮಾರ ರವರು ನೇಮಿಸದ್ದಾರೆ ಅದರ ಜತೆಗೇನೆ ಕೆಪಿಸಿಸಿ ಮಾಧ್ಯಮ‌ ಹಾಗೂ ಸಂವಹನ ಸಮಿತಿ ರಾಜ್ಯಾಧ್ಯಕ್ಷರಾದ ಪ್ರಿಯಾಂಕ ಖರ್ಗೆ ಯವರು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಾಡಿ ನೇಮಿಸಿದ‌ ಹೊಚ್ಚ ಹೊಸ ಸಮಿತಿಯನ್ನೂ ಡಿ.ಕೆ ಶಿವಕುಮಾರ್ ರವರು ಅನುಮೋದಿಸಿದ್ದಾರೆ.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಯಾವುದೇ ನಿರ್ದಿಷ್ಟ ಹುದ್ದೆ ಜವಾಬ್ದಾರಿ ಇಲ್ಲದಿದ್ದರೂ ಕಾಂಗ್ರೆಸ್ ಪರ ನಿಷ್ಠೆ ಯಿಂದ ಕೆಲಸ ಮಾಡುತ್ತಿದ್ದ ತನಗೆ ಇಂದಿನಿಂದ ನಿರ್ಧಿಷ್ಟವಾದ ಜವಾಬ್ದಾರಿ ಗಳು ಸಿಕ್ಕಿದ್ದು ಸಂತೋಷ ಆಗಿದೆ ಎಂದು ಅವರು ತಿಳಿಸಿದ್ದಾರೆ

ಡಿಕೆ ಶಿವಕುಮಾರ್ ರವರಿಗೆ,ಪ್ರಿಯಾಂಕಖರ್ಗೆಯವರಿಗೆ ವಿಶೇಷ ಧನ್ಯವಾದಗಳನ್ನು ತಿಳಿಸಿದ ಅವರು ಕಾಂಗ್ರೆಸ್ ನ ಕಟ್ಟಕಡೆಯ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ಪಡೆದು ಈ ಜವಾಬ್ದಾರಿಗಳನ್ನು ನಿರ್ವಹಿಸಲಿದ್ದಾರೆ ಎಂದೂ ತಿಳಿಸಿದರು.

ಉಡುಪಿ: ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡ ಮುಚ್ಚಲು ಕ್ರಮ ; ತಕ್ಷಣದಲ್ಲಿ ಕಾಮಗಾರಿ ಆರಂಭ : ಶಾಸಕ ರಘುಪತಿ ಭಟ್ – Vishwanews24

Leave a Reply