ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಪ್ರತಾಪ್ ಚಂದ್ರ ಶೆಟ್ಟಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಆದರೆ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತಿ ಬ್ಲಾಕ್ಗಳ ಕೆಪಿಸಿಸಿ ಸದಸ್ಯರ ನೇಮಕಾತಿಯಲ್ಲಿ ಕೆಲವು ಆಂತರಿಕ ರಾಜಕೀಯ ಬೆಳವಣಿಗೆಗಳು ನಡೆದ ಬಳಿಕ ಪ್ರತಾಪ್ ಚಂದ್ರ ಶೆಟ್ಟಿ ಅವರು ಕಾಂಗ್ರೆಸ್ ಸಮಿತಿ ಸದಸ್ಯತ್ವಕ್ಕೆ (ಕೆಪಿಸಿಸಿ) ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.
ಇನ್ನು ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಸಿ ಎಂ. ಜಾನ್ ಮತ್ತು ಕೆಪಿಸಿಸಿ ಕಾರ್ಯಾದ್ಯಕ್ಷ ದ್ರುವ ನಾರಾಯಣರವರು ಪ್ರತಾಪಚಂದ್ರ ಶೆಟ್ಟಿಯವರ ನಿವಾಸಕ್ಕೆ ಬೇಟಿ ನೀಡಿದ್ದಾರೆ.
ಈ ಮಹತ್ವದ ಬೆಳವಣಿಗೆಯ ಕುರಿತು ಮಾತನಾಡಿದ ಧ್ರುವ ನಾರಾಯಣ್, ಪ್ರತಾಪ್ ಚಂದ್ರ ಶೆಟ್ಟಿ ಅವರು ಪಕ್ಷದಲ್ಲಿ ತುಂಬಾ ಸಕ್ರಿಯರಾಗಿದ್ದಾರೆ, ಯಾವುದೇ ಭಿನ್ನಾಭಿಪ್ರಾಯವಿಲ್ಲ, ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭಿವೃದ್ಧಿ ಹೊಂದುತ್ತಿದೆ ಎಂದು ಹೇಳಿದ್ದಾರೆ.
Join our Whatsapp group by clicking the below link 👇👇
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…