ಉಡುಪಿ: ಕೆಸರು ತೆಗೆದು ಸ್ವಚ್ಚ ಮಾಡಲೆಂದು ಬಾವಿಗೆ ಇಳಿದ ಇಬ್ಬರು ವ್ಯಕ್ತಿಗಳ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತೊಬ್ಬನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಬುಧವಾರ ಸಂಜೆ ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ದೇವಾಡಿಗರ ಬೆಟ್ಟುವಿನಲ್ಲಿ ನಡೆದಿದೆ.
ದುರ್ಗೇಶ್ (34) ಮೃತಪಟ್ಟವರು. ಅಡಿವೆಪ್ಪ ಕುರಿ (50) ರಕ್ಷಣೆಗೊಳಗಾದವರು. ಇಬ್ಬರು ಕೂಡ ಕೊಪ್ಪಳ ಜಿಲ್ಲೆಯವರಾಗಿದ್ದು, ಬ್ರಹ್ಮಾವರದ ಸಾಲಿಕೆರೆಯಲ್ಲಿ ವಾಸಮಾಡಿಕೊಂಡು ಕೂಲಿ ಕೆಲಸ ಮಾಡುತ್ತಿದ್ದರು.
35 ಅಡಿ ಆಳದ ಬಾವಿಯಲ್ಲಿ ಕೆಸರು ಇದೆ ಎಂದು ಬಾವಿಯೊಳಗೆ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಛ ಮಾಡುತ್ತಿದ್ದರು. ಈ ವೇಳೇ ಘಟನೆ ನಡೆದಿದೆ. ಆಮ್ಲಜನಕ ಕೊರತೆಯಾಗಿರುವುದೇ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…