Featured

ಉಡುಪಿ: ಕೇಂದ್ರ ಸರಕಾರದ ಬ್ಯಾಂಕ್‌ ವಿಲೀನ ಧೋರಣೆ ವಿರೋಧಿಸಿ ಪ್ರತಿಭಟನೆ -Vishwanews24

ಉಡುಪಿ : ಕೇಂದ್ರ ಸರಕಾರದ ಬ್ಯಾಂಕ್‌ ವಿಲೀನಿಕರಣ ಧೋರಣೆ ವಿರೋಧಿಸಿ ಜಿಲ್ಲಾ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆ ಹಾಗೂ ಕಾರ್ಪೊರೇಶನ್‌ ಬ್ಯಾಂಕ್‌ ಅಧಿಕಾರಿಗಳು ಸಂಘಟನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರಕಾರ 10 ಸಾರ್ವಜನಿಕ ರಂಗದ ಬ್ಯಾಂಕ್‌ಗಳನ್ನು ವಿಲೀನಿಕರಿಸಿ 4 ಬ್ಯಾಂಕ್‌ಗಳಾಗಿ ಪರಿವರ್ತಿಸುತ್ತಿದೆ. ಆ ಮೂಲಕ 6 ಬ್ಯಾಂಕ್‌ಗಳು ತನ್ನ ಅಸ್ಥಿತ್ವವನ್ನು ಕಳೆದುಕೊಳ್ಳಲಿದೆ. ಬ್ಯಾಂಕ್‌ ವಿಲೀನದಿಂದ ಬ್ಯಾಂಕ್‌ಗಳ ಶಕ್ತಿ ಹೆಚ್ಚುವುದಿಲ್ಲ. ಅನುತ್ಪಾದಕ ಆಸ್ತಿ ಪ್ರಮಾಣ ತಗ್ಗುವುದಿಲ್ಲ, ಸಾಲ ನೀಡುವ ಶಕ್ತಿಯೂ ಹೆಚ್ಚುವುದಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ವಿರುದ್ಧ ಘೋಷಣೆ ಕೂಗಿದರು.

ಬ್ಯಾಂಕ್‌ ಅಧಿಕಾರಿಗಳ ಸಂಘಟನೆಯ ಅಶೋಕ್‌ ಕೋಟ್ಯಾನ್‌ ಮಾತನಾಡಿ, ಕೇಂದ್ರ ಸರಕಾರ ನೋಟು ರದ್ದುಗೊಳಿಸಿದಾಗ ಸಾರ್ವಜನಿಕರಿಗೆ ಸಮಸ್ಯೆಯಾಗ ಬಾರದು ಎನ್ನುವ ನಿಟ್ಟಿನಲ್ಲಿ ಬ್ಯಾಂಕ್‌ ಸಿಬಂದಿಗಳು ಹಗಲಿರಳು ಕೆಲಸ ಮಾಡಿದ್ದಾರೆ. ಆದರೂ ಕೇಂದ್ರ ಸರಕಾರ ಕಳೆದ 2 ವರ್ಷದಿಂದ ಸಿಬಂದಿಗಳ ವೇತನ ಪರಿಷ್ಕರಣೆ ಮುಂದಾಗಿಲ್ಲ. ಬ್ಯಾಂಕ್‌ ವಿಲೀನಿಕರಣ ಕೈಬಿಟ್ಟು ನೌಕರರಿಗೆ ಪೂರಕವಾಗುವಂತ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಬ್ಯಾಂಕ್‌ ನೌಕರರ ಸಂಘದ ಅಧ್ಯಕ್ಷ ರಾಮಮೋಹನ್‌, ಹೇಮಂತ್‌ ಯು, ಸದಸ್ಯರಾದ ಮನೋಜ್‌ ಕುಮಾರ್‌, ರಮೇಶ್‌, ವಂಶಿಕೃಷ್ಣ, ಜಯನ್‌ ಮಲ್ಪೆ, ಜಿಲ್ಲಾ ಬ್ಯಾಂಕ್‌ ಸಂಘಟನೆಗಳ ಸಂಯುಕ್ತ ವೇದಿಕೆ ಸಂಚಾಲಕ ಹೆರಾಲ್ಡ್‌ ಡಿ’ಸೋಜ, ಕಾರ್ಪೊರೇಶನ್‌ ಬ್ಯಾಂಕ್‌ ಉಡುಪಿ ವಲಯದ ಕಾರ್ಯದರ್ಶಿ ನಾಗೇಶ್‌ ನಾಯಕ್‌ ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

7 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

7 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

7 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

10 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

10 hours ago