ಉಡುಪಿ : ಕೇಂದ್ರ ಸರಕಾರದ ಬ್ಯಾಂಕ್ ವಿಲೀನಿಕರಣ ಧೋರಣೆ ವಿರೋಧಿಸಿ ಜಿಲ್ಲಾ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ಹಾಗೂ ಕಾರ್ಪೊರೇಶನ್ ಬ್ಯಾಂಕ್ ಅಧಿಕಾರಿಗಳು ಸಂಘಟನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಕೇಂದ್ರ ಸರಕಾರ 10 ಸಾರ್ವಜನಿಕ ರಂಗದ ಬ್ಯಾಂಕ್ಗಳನ್ನು ವಿಲೀನಿಕರಿಸಿ 4 ಬ್ಯಾಂಕ್ಗಳಾಗಿ ಪರಿವರ್ತಿಸುತ್ತಿದೆ. ಆ ಮೂಲಕ 6 ಬ್ಯಾಂಕ್ಗಳು ತನ್ನ ಅಸ್ಥಿತ್ವವನ್ನು ಕಳೆದುಕೊಳ್ಳಲಿದೆ. ಬ್ಯಾಂಕ್ ವಿಲೀನದಿಂದ ಬ್ಯಾಂಕ್ಗಳ ಶಕ್ತಿ ಹೆಚ್ಚುವುದಿಲ್ಲ. ಅನುತ್ಪಾದಕ ಆಸ್ತಿ ಪ್ರಮಾಣ ತಗ್ಗುವುದಿಲ್ಲ, ಸಾಲ ನೀಡುವ ಶಕ್ತಿಯೂ ಹೆಚ್ಚುವುದಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ವಿರುದ್ಧ ಘೋಷಣೆ ಕೂಗಿದರು.
ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಅಶೋಕ್ ಕೋಟ್ಯಾನ್ ಮಾತನಾಡಿ, ಕೇಂದ್ರ ಸರಕಾರ ನೋಟು ರದ್ದುಗೊಳಿಸಿದಾಗ ಸಾರ್ವಜನಿಕರಿಗೆ ಸಮಸ್ಯೆಯಾಗ ಬಾರದು ಎನ್ನುವ ನಿಟ್ಟಿನಲ್ಲಿ ಬ್ಯಾಂಕ್ ಸಿಬಂದಿಗಳು ಹಗಲಿರಳು ಕೆಲಸ ಮಾಡಿದ್ದಾರೆ. ಆದರೂ ಕೇಂದ್ರ ಸರಕಾರ ಕಳೆದ 2 ವರ್ಷದಿಂದ ಸಿಬಂದಿಗಳ ವೇತನ ಪರಿಷ್ಕರಣೆ ಮುಂದಾಗಿಲ್ಲ. ಬ್ಯಾಂಕ್ ವಿಲೀನಿಕರಣ ಕೈಬಿಟ್ಟು ನೌಕರರಿಗೆ ಪೂರಕವಾಗುವಂತ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ರಾಮಮೋಹನ್, ಹೇಮಂತ್ ಯು, ಸದಸ್ಯರಾದ ಮನೋಜ್ ಕುಮಾರ್, ರಮೇಶ್, ವಂಶಿಕೃಷ್ಣ, ಜಯನ್ ಮಲ್ಪೆ, ಜಿಲ್ಲಾ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ಸಂಚಾಲಕ ಹೆರಾಲ್ಡ್ ಡಿ’ಸೋಜ, ಕಾರ್ಪೊರೇಶನ್ ಬ್ಯಾಂಕ್ ಉಡುಪಿ ವಲಯದ ಕಾರ್ಯದರ್ಶಿ ನಾಗೇಶ್ ನಾಯಕ್ ಉಪಸ್ಥಿತರಿದ್ದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…