ಉಡುಪಿ : ಕೇಂದ್ರ ಸರಕಾರದ ಬ್ಯಾಂಕ್ ವಿಲೀನಿಕರಣ ಧೋರಣೆ ವಿರೋಧಿಸಿ ಜಿಲ್ಲಾ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ಹಾಗೂ ಕಾರ್ಪೊರೇಶನ್ ಬ್ಯಾಂಕ್ ಅಧಿಕಾರಿಗಳು ಸಂಘಟನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಕೇಂದ್ರ ಸರಕಾರ 10 ಸಾರ್ವಜನಿಕ ರಂಗದ ಬ್ಯಾಂಕ್ಗಳನ್ನು ವಿಲೀನಿಕರಿಸಿ 4 ಬ್ಯಾಂಕ್ಗಳಾಗಿ ಪರಿವರ್ತಿಸುತ್ತಿದೆ. ಆ ಮೂಲಕ 6 ಬ್ಯಾಂಕ್ಗಳು ತನ್ನ ಅಸ್ಥಿತ್ವವನ್ನು ಕಳೆದುಕೊಳ್ಳಲಿದೆ. ಬ್ಯಾಂಕ್ ವಿಲೀನದಿಂದ ಬ್ಯಾಂಕ್ಗಳ ಶಕ್ತಿ ಹೆಚ್ಚುವುದಿಲ್ಲ. ಅನುತ್ಪಾದಕ ಆಸ್ತಿ ಪ್ರಮಾಣ ತಗ್ಗುವುದಿಲ್ಲ, ಸಾಲ ನೀಡುವ ಶಕ್ತಿಯೂ ಹೆಚ್ಚುವುದಿಲ್ಲ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ವಿರುದ್ಧ ಘೋಷಣೆ ಕೂಗಿದರು.
ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ಅಶೋಕ್ ಕೋಟ್ಯಾನ್ ಮಾತನಾಡಿ, ಕೇಂದ್ರ ಸರಕಾರ ನೋಟು ರದ್ದುಗೊಳಿಸಿದಾಗ ಸಾರ್ವಜನಿಕರಿಗೆ ಸಮಸ್ಯೆಯಾಗ ಬಾರದು ಎನ್ನುವ ನಿಟ್ಟಿನಲ್ಲಿ ಬ್ಯಾಂಕ್ ಸಿಬಂದಿಗಳು ಹಗಲಿರಳು ಕೆಲಸ ಮಾಡಿದ್ದಾರೆ. ಆದರೂ ಕೇಂದ್ರ ಸರಕಾರ ಕಳೆದ 2 ವರ್ಷದಿಂದ ಸಿಬಂದಿಗಳ ವೇತನ ಪರಿಷ್ಕರಣೆ ಮುಂದಾಗಿಲ್ಲ. ಬ್ಯಾಂಕ್ ವಿಲೀನಿಕರಣ ಕೈಬಿಟ್ಟು ನೌಕರರಿಗೆ ಪೂರಕವಾಗುವಂತ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ರಾಮಮೋಹನ್, ಹೇಮಂತ್ ಯು, ಸದಸ್ಯರಾದ ಮನೋಜ್ ಕುಮಾರ್, ರಮೇಶ್, ವಂಶಿಕೃಷ್ಣ, ಜಯನ್ ಮಲ್ಪೆ, ಜಿಲ್ಲಾ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ ಸಂಚಾಲಕ ಹೆರಾಲ್ಡ್ ಡಿ’ಸೋಜ, ಕಾರ್ಪೊರೇಶನ್ ಬ್ಯಾಂಕ್ ಉಡುಪಿ ವಲಯದ ಕಾರ್ಯದರ್ಶಿ ನಾಗೇಶ್ ನಾಯಕ್ ಉಪಸ್ಥಿತರಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…