Featured

ಉಡುಪಿ :ಕೇಂದ್ರ ಸರ್ಕಾರದ ವೋಟ್ ಚೋರಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಮಾನವ ಸರಪಳಿ – vishwanews24

ಸಿಟಿ ಬಸ್‌ ನಿಲ್ದಾಣದಿಂದ ಮಣಿಪಾಲದವರೆಗೆ ಮಾನವ ಸರಪಳಿಯಲ್ಲಿ ಸಾವಿರಾರು ಮಂದಿ ಭಾಗಿ

ಕೇಂದ್ರ ಬಿಜೆಪಿ ಸರಕಾರ ಸಂವಿಧಾನವನ್ನು‌ ಹತ್ತಿಕ್ಕಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ : ವಿನಯಕುಮಾರ್ ಸೊರಕೆ

ಉಡುಪಿ: ಕೇಂದ್ರ ಸರ್ಕಾರದ ಮತಗಳವು ಹಗರಣದ ಬಗ್ಗೆ ಜನಜಾಗೃತಿ ‌ಮೂಡಿಸಲು ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಸಹಿ ಸಂಗ್ರಹ ಅಭಿಯಾನದ ಸಮಾರೋಪದ ಅಂಗವಾಗಿ ನಗರದ ಸಿಟಿ ಬಸ್‌ ನಿಲ್ದಾಣದಿಂದ ಮಣಿಪಾಲದವರೆಗೆ ಇಂದು ಮಾನವ ಸರಪಳಿ ರಚಿಸಲಾಯಿತು.

ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ವಂದೇ ಮಾತರಂ ಹಾಗೂ ಸಂವಿಧಾನ ಪೀಠಿಕೆ ಓದುವ ಮೂಲಕ‌ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ನಿರ್ಮಾಣ ಮಾಡಿರುವ ಸಂವಿಧಾನಕ್ಕೆ ನಿರಂತರವಾಗಿ‌ ಧಕ್ಕೆ ತರುವ ಕೆಲಸ ಆಗುತ್ತಿದೆ. ಕೇಂದ್ರ ಬಿಜೆಪಿ ಸರಕಾರ ಸಂವಿಧಾನವನ್ನು‌ ಹತ್ತಿಕ್ಕಲು ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ.

ವಿರೋಧ ಪಕ್ಷದ ಮೇಲೆ ಎಲ್ಲ ರೀತಿಯ ಅಸ್ತ್ರಗಳನ್ನು ಪ್ರಯೋಗಿಸುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಡಲಿ ಪೆಟ್ಟು ಕೊಡುವ ಕೆಲಸಕ್ಕೆ ಕೇಂದ್ರ ಬಿಜೆಪಿ ಸರಕಾರ ಕೈಹಾಕಿದೆ. ಇಂತಹ ಸಂದರ್ಭದಲ್ಲಿ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಹಾಗೂ ಕೇಂದ್ರ ಸರಕಾರದ ಜನವಿರೋಧಿ ನೀತಿಗಳನ್ನು ಜನರಿಗೆ ತಿಳಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಂತಹ ಮಹಾತ್ಮ ಗಾಂಧೀಜಿಯವರಿಗೆ ಸಂಸತ್ತಿನಲ್ಲಿ ಅವಮಾನಿಸುವ ಮೂಲಕ ಎರಡನೇ ಬಾರಿಗೆ ಅವರನ್ನು ಕೊಲೆ ಮಾಡುವ ಕಾರ್ಯಕ್ಕೆ ಬಿಜೆಪಿ ಸರಕಾರ ಮುಂದಾಗಿದೆ. ಗಾಂಧೀಜಿ ಅವರ ರಾಮರಾಜ್ಯದ ಕನಸಿಗೆ ಹೊಡೆತ ನೀಡುವ ಕೆಲಸ ಮಾಡಿದ್ದಾರೆ ಎಂದು ದೂರಿದರು. ನಗರದ ಸಿಟಿ ಬಸ್‌ ನಿಲ್ದಾಣದಿಂದ ಮಣಿಪಾಲದವರೆಗೆ ನಡೆದ ಮಾನವ ಸರಪಳಿಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಕೆಪಿಸಿಸಿ ವಕ್ತಾರ ನಿಕೇತ್ ರಾಜ್ ಮೌರ್ಯ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ನಾರಾಯಣಗುರು ಅಭಿವೃದ್ಧಿ‌ ಮಂಡಳಿ ಅಧ್ಯಕ್ಷ ಮಂಜುನಾಥ್ ಪೂಜಾರಿ ಹೆಬ್ರಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಹರಿಪ್ರಸಾದ್ ರೈ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ರಾಜು ಪೂಜಾರಿ, ವೆರೋನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

8 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

8 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

9 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

10 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

10 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

11 hours ago