ಉಡುಪಿ: ನಿರ್ಮಲ ಸೀತಾರಾಮನ್ ರವರು ಚುನಾವಣಾ ಹೊಸ್ತಿಲಲ್ಲಿ ಮತದಾರರ ಓಲೈಕೆಗಾಗಿ ಯಾವುದೇ ಉಚಿತ ಭಾಗ್ಯಗಳನ್ನೂ ಘೋಷಿಸದೆ ಆರ್ಥಿಕತೆಯಲ್ಲಿ ಬಲಿಷ್ಠ ಭಾರತ ನಿರ್ಮಾಣದ ಸಂಕಲ್ಪಕ್ಕೆ ಈ ಬಾರಿಯ ಬಜೆಟ್ ಮೂಲಕ ಮುನ್ನುಡಿ ಬರೆದಿದ್ದಾರೆ.
ದೇಶದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ರೈತರು,ಯುವ ಜನತೆ ಹಾಗೂ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಬಡವರ ಕಲ್ಯಾಣವೇ ದೇಶದ ಕಲ್ಯಾಣ ಚಿಂತನೆಯಡಿ ಬಜೆಟ್ ಮಂಡಿಸಿದ್ದಾರೆ.
ದೇಶದ ಜನತೆಗೆ ತೆರಿಗೆಯ ಹೊರೆ ಹೇರದೆ ಜಿ ಎಸ್ ಟಿ ಸಂಗ್ರಹಣೆಯಲ್ಲಿ ಗಣನೀಯ ಹೆಚ್ಚಳ ದಾಖಲಿಸುವ ಮೂಲಕ ಆರ್ಥಿಕತೆಗೆ ವಿಶೇಷ ಶಕ್ತಿ ತುಂಬುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ.
ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2248 ಕೋಟಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ 75000 ಕೋಟಿ ಮೀಸಲು, ರೈಲ್ವೇ ಸೇವೆ ಉನ್ನತೀಕರಣಕ್ಕೆ ವಿಶೇಷ ಆದ್ಯತೆ, ಪಿ. ಎಂ. ಆವಾಸ್ ಯೋಜನೆಯಡಿ 2 ಕೋಟಿ ಮನೆ ನಿರ್ಮಾಣ, ಮಹಿಳೆಯರ ಸಬಲೀಕರಣಕ್ಕಾಗಿ ಲಕ್ ಪತಿ ದೀದಿ ಯೋಜನೆ, ಅಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯಡಿ ಸೇರ್ಪಡೆಗೊಳಿಸುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಪಾಲಿಗೆ ಆಶಾದಾಯಕ ಬಜೆಟ್ ಮಂಡಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…