Featured

ಉಡುಪಿ : ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರ ಆಕ್ರೋಶ – vishwanews24

ಉಡುಪಿ : ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳ ಬೆಲೆ ಏರಿಕೆ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ತೀವ್ರ ಆಕ್ರೋಶ

ಏ. 26 ರಂದು ಕಾಪು ಹಾಗೂ ಏ 28 ರಂದು ಉಡುಪಿ DC ಕಛೇರಿ ಮುಂಭಾಗ ಪ್ರತಿಭಟನಾ ಅಭಿಯಾನ

ಉಡುಪಿ :  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರಾಜ್ಯದ ಜನತೆಯ ಮೇಲೆ ಮಿತಿಮೀರಿದ ಆರ್ಥಿಕ ಹೊರೆಯನ್ನು ಹೇರುತ್ತಿರುವುದರ ವಿರುದ್ಧ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾ ಸಮಿತಿಯು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ.

ಈಗಾಗಲೇ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಅತ್ತ ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸಿದರೆ, ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್, ಹಾಲು, ನೀರು, ಬಸ್ ದರಗಳನ್ನು ಏರಿಸಿದ್ದು ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಅದರ ಜೊತೆಗೆ ಜನಸ್ನೇಹಿಯಾಗಿದ್ದ ನಮ್ಮ ಮೆಟ್ರೋ ರೈಲಿನ ದರ ಏರಿಕೆಯಿಂದ ಜನಸಾಮಾನ್ಯರು ಮತ್ತೆ ತಮ್ಮ ಖಾಸಗಿ ವಾಹನಗಳ ಕಡೆ ಮುಖ ಮಾಡುವಂತಾಗಿದೆ.

ಜಾಗತಿಕವಾಗಿ ತೈಲ ಬೆಲೆಗಳು ಇಳಿಯುತ್ತಿದ್ದರೂ ಸಹ ತೈಲಗಳ ಮೇಲೆ ಅಬಕಾರಿ ಸುಂಕ ಹೆಚ್ಚಳ ಮಾಡುವ ಮೂಲಕ ಸರ್ಕಾರ ಹಗಲು ದರೋಡೆಗೆ ಇಳಿದಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಕಚ್ಚಾತೈಲಗಳ ಬೆಲೆ ಕುಸಿತದ ಲಾಭ ಜನ ಸಾಮಾನ್ಯರಿಗೆ ದೊರಕದಂತೆ ಮಾಡಲಾಗಿದೆ. ಬಡ, ಮಧ್ಯಮ ವರ್ಗಗಳಿಗೆ ಅಭಿವೃದ್ಧಿಯ ಭರವಸೆ ನೀಡಿ ಅಧಿಕಾರಕ್ಕೆ ಏರಿರುವ ಸರ್ಕಾರಗಳು ಇದೀಗ ಜನತೆಯ ದೈನಂದಿನ ಜೀವನವನ್ನೇ ತ್ರಾಸದಾಯಕವನ್ನಾಗಿಸಿವೆ.

ಒಂದು ಕಡೆ ಅಚ್ಛೇದಿನ್ ಹೆಸರಲ್ಲಿ ಕೇಂದ್ರ ಸರ್ಕಾರ, ಗ್ಯಾರಂಟಿ ಯೋಜನೆಗಳ ಮೂಲಕ ತಮ್ಮದು ಜನಪರ ಸರ್ಕಾರ ಎನ್ನುವ ರಾಜ್ಯ ಸರ್ಕಾರ ಎರಡೂ ಸೇರಿಕೊಂಡು ಬೆಲೆ ಏರಿಕೆಯಿಂದ ಜನರನ್ನೇ ಲೂಟಿ ಮಾಡುತ್ತಿವೆ. ಇದು ಸಾಲದೆಂಬಂತೆ ಪರಸ್ಪರ ಕೆಸೆರೆರಚಾಟದಲ್ಲಿ ತೊಡಗಿ ಜನರ ಗಮನ ಅತ್ತಕಡೆ ಸೆಳೆದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕೇಂದ್ರ ಬಿಜೆಪಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಗಳು ನಿರಂತರವಾಗಿ ಜನರ ಕಣ್ಣಿಗೆ ಮಣ್ಣೆರಚುವ ಪ್ರಯತ್ನ ಮಾಡುತ್ತಿವೆ‌.

ವಸಾಹತುಶಾಹಿ ಬ್ರಿಟಿಷರ ಜನವಿರೋಧಿ ನೀತಿಗಳಂತೆ ಇಂದು ಕೂಡ ಅಗತ್ಯ ಸೇವಾ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸಿ ದೇಶದ ಜನತೆಯನ್ನು ಆರ್ಥಿಕ ಸಂಕಷ್ಟಕ್ಕೆ ಈಡುಮಾಡಲಾಗುತ್ತಿದೆ. ಅತ್ಯವಶ್ಯಕ ವಸ್ತುಗಳ ಖರೀದಿಗೂ ಭಾರಿ ತೆರಿಗೆ ಪಾವತಿಸಬೇಕಾದಂತ ದುಸ್ಥಿತಿ ಉಂಟಾಗಿದೆ.

ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಂಪೂರ್ಣ ಎಡುವಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ಏಪ್ರಿಲ್‍ 18 ರಿಂದ 28 ರ ವರೆಗೆ ರಾಜ್ಯದಾದ್ಯಂತ ಪ್ರತಿಭಟನಾ ಅಭಿಯಾನ ಹಮ್ಮಿಕೊಳ್ಳಲು ವಿಮೆನ್ ಇಂಡಿಯಾ ಮೂವ್ಮೆಂಟ್ ತೀರ್ಮಾನಿಸಿದ್ದು ಇದರ ಅಂಗವಾಗಿ ದಿನಾಂಕ 26-04-2025 ರಂದು ಕಾಪುವಿನಲ್ಲಿ ಹಾಗೂ 28-04-2025 ರಂದು ಉಡುಪಿ DC ಕಛೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆಯಾಗಿರುವ ನಾಝಿಯ ನಸ್ರುಲ್ಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಾಝಿಯಾ ನಸ್ರುಲ್ಲ, ಜಿಲ್ಲಾಧ್ಯಕ್ಷರು ವಿಮೆನ್ ಇಂಡಿಯಾ ಮೂವ್ಮೆಂಟ್-ಉಡುಪಿ ಜಿಲ್ಲೆ, ನಸೀಮಾ, ಉಪಾಧ್ಯಕ್ಷರು ವಿಮೆನ್ ಇಂಡಿಯಾ ಮೂವ್ಮೆಂಟ್- ಉಡುಪಿ ಜಿಲ್ಲೆ,ನಸೀಮ್ ಫಾತಿಮಾ, ಜಿಲ್ಲಾ ಸಮಿತಿ ಸದಸ್ಯೆ ,ಜೋಹಾರ, ಜಿಲ್ಲಾ ಸಮಿತಿ ಸದಸ್ಯೆ, ರಹಮತುನ್ನಿಸಾ ಜಿಲ್ಲಾ ಸಮಿತಿ ಸದಸ್ಯೆ ಉಪಸ್ಥಿರಿದ್ದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago