ಉಡುಪಿ: ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಬಳಸಿದ್ದಾರೆ ಎಂದು ಕೊರಗ ಸಮುದಾಯದವರ ಮೇಲೆ ದೌರ್ಜನ್ಯ ಮಾಡಿದ ಪೊಲೀಸರನ್ನು ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕರ್ನಾಟಕ ಕೇರಳ ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ ಸರಕಾರವನ್ನು ಆಗ್ರಹಿಸಿದೆ.
ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಅಮ್ಮಣ್ಣಿ ಬೆಳ್ವೆ ನಮ್ಮ ಸಮುದಾಯದವರು ಪುರಾತನ ಕಾಲದಿಂದಲೂ ಅಜಲು, ಅಸ್ಪಶ್ಯತೆಯಿಂದ ಬಹಳ ಹಿಂದುಳಿದವರಾಗಿದ್ದು ಈ ಕಾಲಘಟ್ಟದಲ್ಲಿಯೂ ಸಾಮಾಜಿಕವಾಗಿ ಅಂಚಿಗೆ ತಳ್ಳಲ್ಪಟ್ಟಿದೆ. ಅಲ್ಲದೇ ಸರ್ಕಾರವೂ ನಮ್ಮ ಸಮುದಾಯವನ್ನು ಪಿ.ವಿ.ಟಿ.ಜಿ ಎಂದು ಗುರುತಿಸಿದೆ. ಈ ಹಿಂದಿನಿಂದಲೂ ಶೋಷಣೆಗೆ ಒಳಗಾಗುತ್ತಾ ಬಂದಿದ್ದೇವೆ.
ಒಂದು ಕಡೆ ಆರೋಗ್ಯದ ಸಮಸ್ಯೆಯಿಂದಲೂ ಕೂಡಾ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಿರುವಾಗ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದಲ್ಲಿ ನಮ್ಮ ಕೊರಗ ಸಮುದಾಯದವರು ಮದುವೆ ಮೆಹೆಂದಿ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಹಾಕಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಕೋಟ ಪೋಲಿಸ್ ಠಾಣೆಯ ಸಬ್ ಇನ್ಸಪೆಕ್ಟರ್ ಹಾಗೂ ಒಂಭತ್ತು ಜನ ಸಿಬ್ಬಂದಿಗಳು ಮಹಂದಿ ಮನೆಗೆ ನುಗ್ಗಿ ನಮ್ಮ ಸಮುದಾಯದವರನ್ನು ಮನುಷ್ಯರು ಅಂತ ನೋಡದೆ ಮಹಿಳೆಯರು, ಮಕ್ಕಳು, ಹಿರಿಯರು ಅಂತ ನೋಡದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನೆಲಕ್ಕೆ ಉರುಳಿಸಿ ಬೂಟು ಕಾಲಿನಿಂದ ಒದ್ದು ಲಾಟಿಯಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೈ, ಕಾಲು ಬೆನ್ನಿನಲ್ಲಿ ತಲೆಯಲ್ಲಿ ಬಾಸುಂಡೆ ಬರುವಂತೆ ಭಾರಿಸಿದ್ದಾರೆ. ನಂತರ 4 ಮಂದಿ ನಮ್ಮವರನ್ನು ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಿ ಹಾಕಿದವರ ಬಟ್ಟೆಯನ್ನು ಬಿಚ್ಚಲು ಹೇಳಿ ಲಾಟಿಯಿಂದ ಹಿಗ್ಗ ಮುಗ್ಗ ಥಳಿಸಿದ್ದಾರೆ.
ಹಾಗಾದರೆ ನಮ್ಮವರು ಮಾಡಿದ ತಪ್ಪಾದರೂ ಏನು ? ನಮ್ಮ ಸಮುದಾಯದವರೆಂದರೆ ಅಷ್ಟೊಂದು ತಾತ್ಸಾರವೇ ನಮ್ಮ ಸಮುದಾಯದವರೆಂದರೆ ಪ್ರಾಣಿಗಳಿಗಿಂತಲೂ ಹೀನವೇ? ಆದುದರಿಂದ ನಮ್ಮ ಸಮುದಾಯದವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಕೋಟ ಪೋಲಿಸ್ ಠಾಣೆಯ ಸಿಬ್ಬಂದಿಗಳನ್ನು ಈ ಕೂಡಲೇ ಕೆಲಸದಿಂದ ಖಾಯಂ ವಜಾ ಮಾಡಬೇಕು ಹಾಗೂ ಹಲ್ಲೆ ನಡೆಸಿದ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನು ಬಂಧಿಸಿ, ತನಿಖೆಗೆ ಒಳಪಡಿಸಬೇಕಾಗಿ ವಿನಂತಿ, ಹಲ್ಲೆಗೊಳಗಾದ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡಬೇಕು ಇಲ್ಲದಿದ್ದಲ್ಲಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಮುಂದಿನ 7 ದಿನಗಳ ಒಳಗೆ ಧರಣಿ ಸತ್ಯಾಗ್ರಹ ಮಾಡಲಿದ್ದೇವೆ ಎಂದರು.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…