Featured

ಉಡುಪಿ : ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು : ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ – Vishwanews24

ನಮ್ಮವರು ಮಾಡಿದ ತಪ್ಪಾದರೂ ಏನು ? ನಮ್ಮ ಸಮುದಾಯದವರೆಂದರೆ ಪ್ರಾಣಿಗಳಿಗಿಂತಲೂ ಹೀನವೇ?..

ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು..

ಕರ್ನಾಟಕ ಕೇರಳ ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ ಆಗ್ರಹ ..

ಉಡುಪಿ: ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಬಳಸಿದ್ದಾರೆ ಎಂದು ಕೊರಗ ಸಮುದಾಯದವರ ಮೇಲೆ ದೌರ್ಜನ್ಯ ಮಾಡಿದ ಪೊಲೀಸರನ್ನು ಕೇವಲ ಅಮಾನತು ಅಥವಾ ವರ್ಗಾವಣೆ ಮಾಡಿದರೆ ಸಾಲದು ಬದಲಾಗಿ ಅವರನ್ನು ಸೇವೆಯಿಂದಲೇ ವಜಾ ಮಾಡಬೇಕು ಮತ್ತು ಕೂಡಲೇ ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಕರ್ನಾಟಕ ಕೇರಳ ಕೊರಗ ಅಭಿವೃದ್ದಿ ಸಂಘಗಳ ಒಕ್ಕೂಟ ಸರಕಾರವನ್ನು ಆಗ್ರಹಿಸಿದೆ.

ಈ ಕುರಿತು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಅಮ್ಮಣ್ಣಿ ಬೆಳ್ವೆ ನಮ್ಮ ಸಮುದಾಯದವರು ಪುರಾತನ ಕಾಲದಿಂದಲೂ ಅಜಲು, ಅಸ್ಪಶ್ಯತೆಯಿಂದ ಬಹಳ ಹಿಂದುಳಿದವರಾಗಿದ್ದು ಈ ಕಾಲಘಟ್ಟದಲ್ಲಿಯೂ ಸಾಮಾಜಿಕವಾಗಿ ಅಂಚಿಗೆ ತಳ್ಳಲ್ಪಟ್ಟಿದೆ. ಅಲ್ಲದೇ ಸರ್ಕಾರವೂ ನಮ್ಮ ಸಮುದಾಯವನ್ನು ಪಿ.ವಿ.ಟಿ.ಜಿ ಎಂದು ಗುರುತಿಸಿದೆ. ಈ ಹಿಂದಿನಿಂದಲೂ ಶೋಷಣೆಗೆ ಒಳಗಾಗುತ್ತಾ ಬಂದಿದ್ದೇವೆ.

ಒಂದು ಕಡೆ ಆರೋಗ್ಯದ ಸಮಸ್ಯೆಯಿಂದಲೂ ಕೂಡಾ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಿರುವಾಗ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮದಲ್ಲಿ ನಮ್ಮ ಕೊರಗ ಸಮುದಾಯದವರು ಮದುವೆ ಮೆಹೆಂದಿ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಹಾಕಿದ್ದಾರೆ ಎನ್ನುವ ಒಂದೇ ಕಾರಣಕ್ಕೆ ಕೋಟ ಪೋಲಿಸ್ ಠಾಣೆಯ ಸಬ್ ಇನ್ಸಪೆಕ್ಟರ್ ಹಾಗೂ ಒಂಭತ್ತು ಜನ ಸಿಬ್ಬಂದಿಗಳು ಮಹಂದಿ ಮನೆಗೆ ನುಗ್ಗಿ ನಮ್ಮ ಸಮುದಾಯದವರನ್ನು ಮನುಷ್ಯರು ಅಂತ ನೋಡದೆ ಮಹಿಳೆಯರು, ಮಕ್ಕಳು, ಹಿರಿಯರು ಅಂತ ನೋಡದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ನೆಲಕ್ಕೆ ಉರುಳಿಸಿ ಬೂಟು ಕಾಲಿನಿಂದ ಒದ್ದು ಲಾಟಿಯಿಂದ ಹಿಗ್ಗಾಮುಗ್ಗ ಥಳಿಸಿದ್ದಾರೆ. ಕೈ, ಕಾಲು ಬೆನ್ನಿನಲ್ಲಿ ತಲೆಯಲ್ಲಿ ಬಾಸುಂಡೆ ಬರುವಂತೆ ಭಾರಿಸಿದ್ದಾರೆ. ನಂತರ 4 ಮಂದಿ ನಮ್ಮವರನ್ನು ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗಿ ಹಾಕಿದವರ ಬಟ್ಟೆಯನ್ನು ಬಿಚ್ಚಲು ಹೇಳಿ ಲಾಟಿಯಿಂದ ಹಿಗ್ಗ ಮುಗ್ಗ ಥಳಿಸಿದ್ದಾರೆ.

ಹಾಗಾದರೆ ನಮ್ಮವರು ಮಾಡಿದ ತಪ್ಪಾದರೂ ಏನು ? ನಮ್ಮ ಸಮುದಾಯದವರೆಂದರೆ ಅಷ್ಟೊಂದು ತಾತ್ಸಾರವೇ ನಮ್ಮ ಸಮುದಾಯದವರೆಂದರೆ ಪ್ರಾಣಿಗಳಿಗಿಂತಲೂ ಹೀನವೇ? ಆದುದರಿಂದ ನಮ್ಮ ಸಮುದಾಯದವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಕೋಟ ಪೋಲಿಸ್ ಠಾಣೆಯ ಸಿಬ್ಬಂದಿಗಳನ್ನು ಈ ಕೂಡಲೇ ಕೆಲಸದಿಂದ ಖಾಯಂ ವಜಾ ಮಾಡಬೇಕು ಹಾಗೂ ಹಲ್ಲೆ ನಡೆಸಿದ ಸಬ್ ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಗಳನ್ನು ಬಂಧಿಸಿ, ತನಿಖೆಗೆ ಒಳಪಡಿಸಬೇಕಾಗಿ ವಿನಂತಿ, ಹಲ್ಲೆಗೊಳಗಾದ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡಬೇಕು ಇಲ್ಲದಿದ್ದಲ್ಲಿ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ಮುಂದಿನ 7 ದಿನಗಳ ಒಳಗೆ ಧರಣಿ ಸತ್ಯಾಗ್ರಹ ಮಾಡಲಿದ್ದೇವೆ ಎಂದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

10 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

11 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

11 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

12 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

12 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

12 hours ago